ಬೆಂಗಳೂರು (ಪಿಟಿಐ): ಪೋಸ್ಕೊ ಉಕ್ಕು ಕಂಪೆನಿಗೆ ಕಾರ್ಖಾನೆ ಸ್ಥಾಪಿಸಲು ಅನುಮತಿ ನೀಡಬೇಕೆಂದು ಸರ್ಕಾರಕ್ಕೆ ತಾನು ನಿರ್ದೇಶನ ನೀಡುವುದಿಲ್ಲ ಎಂದು ಹೈಕೋರ್ಟ್ ಶುಕ್ರವಾರ ತಿಳಿಸಿದೆ.
ಗದಗ ಜಿಲ್ಲೆಯಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿದ್ದ ಬಹು ಕೋಟಿ ಪೋಸ್ಕೊ ಉಕ್ಕಿನ ಕಾರ್ಖಾನೆಗೆ ಅನುಮತಿ ನೀಡಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಸುಮಾರು 117 ಮಂದಿ ರೈತರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದ ವಿಚಾರಣೆ ವೇಳೆ ಹೈಕೋರ್ಟ್ ತಾನು ಸರ್ಕಾರಕ್ಕೆ ಈ ವಿಷಯ ಸಂಬಂಧ ಯಾವುದೇ ನಿರ್ದೇಶನ ನೀಡುವುದಿಲ್ಲ ಎಂದು ತಿಳಿಸಿದೆ.
ಮುಖ್ಯನ್ಯಾಯಮೂರ್ತಿಗಳಾದ ವಿಕ್ರಮಜಿತ್ ಸೆನ್ ಹಾಗೂ ಬಿ.ವಿ. ನಾಗರತ್ನ ಅವರು, ತಾವು ಕಾರ್ಖಾನೆಗೆ ಜಮೀನು ನೀಡಲು ಸಿದ್ದ ಎಂದು ಹೇಳಿ ಅರ್ಜಿ ಸಲ್ಲಿಸಿದ್ದ 117 ಮಂದಿ ರೈತರಿಗೆ ಈ ಸಂಬಂಧ ಸರ್ಕಾರಕ್ಕೆ ಮನವಿ ಮಾಡಿ ಎಂದು ಹೇಳಿದರು.