ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೌರಾಣಿಕ ನಾಟಕಕ್ಕೆ ಪ್ರೋತ್ಸಾಹ ಅಗತ್ಯ

Last Updated 17 ಜನವರಿ 2012, 8:55 IST
ಅಕ್ಷರ ಗಾತ್ರ

ಚಾಮರಾಜನಗರ: `ಪೌರಾಣಿಕ ನಾಟಕ ಕಲೆ ಗ್ರಾಮೀಣ ಭಾಗದಲ್ಲಿ ನಶಿಸುವ ಹಂತ ತಲುಪುತ್ತಿದೆ~ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಕೆ. ರಾಜೇಶ್ವರಿ ವಿಷಾದಿಸಿದರು.

ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಹಮ್ಮಿಕೊಂಡಿದ್ದ ಗ್ರಾಮೀಣ ನಾಟಕೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

`ಗ್ರಾಮೀಣ ಸೊಗಡು ಬಿಂಬಿಸುವ ಕಲೆಗಳು ನಶಿಸುತ್ತಿವೆ. ಇವುಗಳನ್ನು ಉಳಿಸಿ ಬೆಳೆಸುವುದು ಎಲ್ಲರ ಜವಾಬ್ದಾರಿ. ರಾಜ್ಯ ಸರ್ಕಾರ ನಾಟಕ ಕಲಾವಿದರಿಗೆ ಮಾಸಾಶನ ನೀಡಬೇಕು. ಜತೆಗೆ, ನಾಟಕ ಪ್ರದರ್ಶನಕ್ಕೂ ಆರ್ಥಿಕ ನೆರವು ನೀಡಬೇಕು. ಆಗ ಮಾತ್ರ ಕಲೆ ಉಳಿಸಲು ಸಾಧ್ಯ~ ಎಂದು ಅಭಿಪ್ರಾಯಪಟ್ಟರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಪದ್ಮಾ ಚಂದ್ರು ಮಾತ ನಾಡಿ, `ಜಿಲ್ಲೆಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಕಲಾವಿದರಿದ್ದಾರೆ. ಅವರಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಿದೆ~ ಎಂದು ಹೇಳಿದರು.

ಸಿನಿಮಾ ಮಾಧ್ಯಮದ ಭರಾಟೆಯಿಂದಾಗಿ ಗ್ರಾಮೀಣ ಕಲೆಗಳಿಗೆ ಕಂಟಕ ಎದುರಾಗಿದೆ. ಮನರಂಜನೆಗಾಗಿ ನಾವೆಲ್ಲರೂ ಸಿನಿಮಾಕ್ಕೆ ಮೊರೆಹೋಗಿದ್ದೇವೆ. ಹೀಗಾಗಿ, ಹಳ್ಳಿಗಳಲ್ಲೂ ಪೌರಾಣಿಕ ನಾಟಕ ಪ್ರದರ್ಶನ ಕಡಿಮೆಯಾಗುತ್ತಿದೆ. ಇದು ಆತಂಕಕಾರಿ ಸಂಗತಿ ಎಂದರು.

ಕುಟುಂಬದ ಸದಸ್ಯರು ಒಟ್ಟಾಗಿ ಕುಳಿತು ನೋಡುವಂತಹ ಸಿನಿಮಾಗಳು ಬರುತ್ತಿಲ್ಲ. ಪೌರಾಣಿಕ ನಾಟಕಗಳನ್ನು ಎಲ್ಲರೂ ಕುಳಿತು ವೀಕ್ಷಿಸಬಹುದು. ನಾಟಕ ಸಾರುವ ಸಂದೇಶವನ್ನು ಜೀವನದಲ್ಲಿಯೂ ಅಳವಡಿಸಿಕೊಳ್ಳಬಹುದು ಎಂದ ಅವರು, ಹಿರಿಯರು ಹಾಗೂ ಕಿರಿಯರು ಎಂಬ ಭೇದಭಾವ ಇಲ್ಲದೆ ಎಲ್ಲರೂ ನಾಟಕ ಕಲೆ ಉಳಿಸಬೇಕಿದೆ. ಸರ್ಕಾರ ಈ ನಿಟ್ಟಿನಲ್ಲಿ ಹೆಚ್ಚಿನ ಪ್ರೋತ್ಸಾಹ ನೀಡಬೇಕಿದೆ ಎಂದು ಒತ್ತಾಯಿಸಿದರು.

ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಸ್. ಮಂಜಪ್ಪ ಮಾತನಾಡಿ, `ಜಿಲ್ಲೆಯಲ್ಲಿ ಸುಸಜ್ಜಿತ ರಂಗಮಂದಿರದ ಕೊರತೆಯಿದೆ. ಇದರ ಪರಿಣಾಮ ನಾಟಕ ಪ್ರದರ್ಶನಕ್ಕೆ ತೊಡಕಾಗಿದೆ~ ಎಂದರು.
ಪ್ರಸ್ತುತ ರಂಗಮಂದಿರ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಕಟ್ಟಡ ಕಾಮಗಾರಿ ಪೂರ್ಣಗೊಂಡರೆ ರಂಗ ಚಟುವಟಿಕೆ ನಡೆಸಲು ಸಹಕಾರಿಯಾಗಲಿದೆ ಎಂದು ಹೇಳಿದರು.

ಸಂತೇಮರಹಳ್ಳಿಯ ಶ್ರೀಬಸವೇಶ್ವರ ಕಲಾ ತಂಡದ ಸದಸ್ಯರು `ದಕ್ಷಯಜ್ಞ~ ನಾಟಕ ಪ್ರದರ್ಶಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT