ನವದೆಹಲಿ, (ಪಿಟಿಐ/ ಐಎಎನ್ಎಸ್): ಮಾಜಿ ರಾಜ್ಯ ಸಚಿವ ಅಮಿತ್ ಷಾ ಭಾಗಿಯಾಗಿದ್ದಾರೆನ್ನಲಾದ , ಶೋರಾಬುದ್ದೀನ್ ಶೇಖ್ ಅವರ ನಕಲಿ ಎನ್ ಕೌಂಟರ್ ಪ್ರಕರಣದ ಪ್ರತ್ಯಕ್ಷದರ್ಶಿ ಎಂದು ಹೇಳಲಾಗುವ ತುಳಸಿರಾಮ್ ಪ್ರಜಾಪತಿಯ ಎನ್ ಕೌಂಟರ್ ಹತ್ಯೆ ಕುರಿತು ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಸಿಬಿಐಗೆ ಆದೇಶ ನೀಡಿದೆ.
ಸುಪ್ರೀಂ ಕೋರ್ಟ್ ನ ಈ ಆದೇಶ ಗುಜರಾತಿನಲ್ಲಿರುವ ಬಿಜೆಪಿ ಸರ್ಕಾರಕ್ಕೆ ಮುಜುಗರ ಉಂಟುಮಾಡಿದೆ.