ನವದೆಹಲಿ (ಐಎಎನ್ಎಸ್): ಗೋಧ್ರಾ ಹತ್ಯಾಕಾಂಡದ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿರುವ ಕಾಂಗ್ರೆಸ್, ಈ ಘಟನೆಯ ನಂತರ ನಡೆದ ಕೋಮು ಗಲಭೆ ಮತ್ತು ಸಾವಿರಾರು ಜನರ ಸಾವಿಗೆ ನರೇಂದ್ರ ಮೋದಿ ಸರ್ಕಾರವೇ ಹೊಣೆ ಎಂದು ಹೇಳಿದೆ.
ತೀರ್ಪು ಕಾನೂನು ಪ್ರಕ್ರಿಯೆಯಾಗಿರುವುದರಿಂದ ನಾವು ನ್ಯಾಯಾಲಯದ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಕಾಂಗ್ರೆಸ್ ವಕ್ತಾರೆ ಜಯಂತಿ ನಟರಾಜನ್ ತಿಳಿಸಿದ್ದಾರೆ.