ವರದಿಗಾರರ ಜೊತೆ ಮಾತನಾಡಿದ ಅವರು,ಸುಪ್ರೀಂ ಕೋರ್ಟ್ ತೀರ್ಪಿನ ವಿವರಗಳನ್ನು ತಿಳಿದುಕೊಳ್ಳದ ಹೊರತು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು. ‘ಭೂಹಗರಣಕ್ಕೆ ಸಂಬಂಧಿಸಿದ ಪ್ರಕರಣ ಕೋರ್ಟ್ ಮುಂದೆ ಇದ್ದರೂ ಅನಗತ್ಯವಾಗಿ ಹಸ್ತಕ್ಷೇಪ ಮಾಡುತ್ತಿರುವ ರಾಜ್ಯಪಾಲ ಎಚ್.ಆರ್. ಭಾರದ್ವಾಜ್ ಸರ್ಕಾರಕ್ಕೆ ಇರುಸು-ಮುರುಸು ಉಂಟು ಮಾಡುತ್ತಿದ್ದಾರೆ ಎಂದು ದೂರಿದರು.