ಸದನದಲ್ಲಿ ಗದ್ದಲದ ವಾತಾವರಣವು ಹೆಚ್ಚಿದ್ದರಿಂದ ಲೋಕಸಭಾ ಸ್ಪೀಕರ್ ಕಲಾಪವನ್ನು ಮಧ್ಯಾಹ್ನಕ್ಕೆ ಮುಂದೂಡಿದರು. ಆದರೆ, ಮಧ್ಯಾಹ್ನವೂ ಪರಿಸ್ಥಿತಿಯು ತಿಳಿಯಾಗಿರಲಿಲ್ಲ. ಇದರಿಂದಾಗಿ ಕಲಾಪವನ್ನು ಒಂದು ದಿನದ ಮಟ್ಟಿಗೆ ಮುಂದೂಡಲಾಯಿತು. ಕೆಲ ಮುಸ್ಲಿಂ ಪಕ್ಷದ ಸದಸ್ಯರು ಬಿಎಸ್ಪಿ ಮತ್ತು ಎಡಪಕ್ಷಗಳ ಸಂಸದರೊಂದಿಗೆ ಸೇರಿಕೊಂಡು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದರು.
ಮಸೀದಿ ಧ್ವಂಸಕ್ಕೆ ಕಾರಣರಾದ ಆರೋಪಿಗಳ ವಿರುದ್ಧ ಸರ್ಕಾರವು ಆದಷ್ಟು ಬೇಗ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಮತ್ತು ಶಿವಸೇನೆ ಪಕ್ಷದ ವಿರುದ್ಧ ಕೂಡ ಕೆಲ ಸಂಸದರು ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದರು.
`ಪ್ರಶ್ನೋತ್ತರ ವೇಳೆ ನಡೆಯಲು ಅವಕಾಶ ಮಾಡಿಕೊಡಿ, ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಕ್ಕೆ ಅವಕಾಶ ನೀಡಲಾಗುವುದು' ಎಂದು ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಅವರು ಸದಸ್ಯರಲ್ಲಿ ಮನವಿ ಮಾಡಿಕೊಂಡರೂ ಸದನದಲ್ಲಿ ಗದ್ದಲವು ಮುಂದುವರೆದಿತ್ತು. ಇದರಿಂದ ಸ್ಪೀಕರ್ ಕಲಾಪವನ್ನು ಮುಂದೂಡಿದರು.