ಕಳೆದ ರಾತ್ರಿ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ~ನಾವು ವ್ಯವಸ್ಥಿತ ಬದಲಾವಣೆಗಾಗಿ ಹೋರಾಡುತ್ತಿದ್ದೇವೆ. ನಾವು ಯಾವ ಅಭ್ಯರ್ಥಿಯ ಪರವಾಗಿಯೂ ಪ್ರಚಾರ ನಡೆಸುತ್ತಿಲ್ಲ, ನಮ್ಮ ಜನಾಂದೋಲನದಿಂದ ಪ್ರತಿಪಕ್ಷಗಳಿಗೆ ಲಾಭವಾದರೆ ಅದಕ್ಕೆ ನಾವು ಹೊಣೆಯಲ್ಲ. ಏನೇ ಆದರೂ ಅದಕ್ಕೆ ಕಾಂಗ್ರೆಸ್ ಪಕ್ಷವೇ ಹೊಣೆ~ ಎಂದು ಹೇಳಿದ್ದಾರೆ.