ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತಿಭಾವಂತರನ್ನು ಗುರುತಿಸಿ: ಅನಂತಕುಮಾರ್

Last Updated 5 ಜುಲೈ 2013, 19:53 IST
ಅಕ್ಷರ ಗಾತ್ರ

ಬೆಂಗಳೂರು: ಸಂಘ- ಸಂಸ್ಥೆಗಳು ವಿವಿಧ ಕ್ಷೇತ್ರಗಳ ಪ್ರತಿಭಾವಂತರನ್ನು ಗುರುತಿಸುವ ಮೂಲಕ ಸಮಾಜದ ಏಳಿಗೆಗೆ ಕೊಡುಗೆ ನೀಡಬೇಕು ಎಂದು ಸಂಸದ ಅನಂತಕುಮಾರ್ ಹೇಳಿದರು.

ಇಟ್ಟಮಡು ಬಡಾವಣೆ ಶ್ರೀ ವಿಪ್ರ ಸ್ನೇಹ ಸಭಾ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಮತ್ತು ನೋಟ್ ಪುಸ್ತಕ ವಿತರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಮುದಾಯದ 50 ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಸಮಾಜದ ವಿವಿಧ ಸಮುದಾಯಗಳಿಗೆ ಸೇರಿದ 300 ವಿದ್ಯಾರ್ಥಿಗಳಿಗೆ ನೋಟ್‌ಬುಕ್ ವಿತರಿಸಲಾಯಿತು.

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಪ್ರಧಾನ ಕಾರ್ಯದರ್ಶಿ ದಿವಾಕರ ಡೋಂಗ್ರೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT