ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತ್ಯೇಕ ಅಪಘಾತ: ನಾಲ್ವರು ಸಾವು

Last Updated 18 ಏಪ್ರಿಲ್ 2013, 7:11 IST
ಅಕ್ಷರ ಗಾತ್ರ

ಹಳೇಬೀಡು: ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ನಾಲ್ವರು ಮೃತಪಟ್ಟಿರುವ ಘಟನೆ ಹಳೇಬೀಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.

ಹರೀಶ್‌ನಾಯ್ಕ(35), ಆನಂದ(35), ಸಂದೀಪ(24) ಪವನ್(14) ಮೃತಪಟ್ಟವರು.

ಹಾಸನ-ಬೇಲೂರು ರಸ್ತೆಯ ಹಾರೋಹಳ್ಳಿ ಗೇಟ್ ಬಳಿ ಎರಡು ಬೈಕುಗಳು ಮುಖಾ ಡಿಕ್ಕಿ ಹೊಡೆದು ಮೂವರು ಮೃತಪಟ್ಟಿದ್ದಾರೆ. ಹಾಸನದಿಂದ ಬೇಲೂರು ಕಡೆಗೆ ಹರೀಶ್ ನಾಯ್ಕ, ಆನಂದ ಬೈಕಿನಲ್ಲಿ ತೆರಳುತ್ತಿದ್ದರು, ಮತ್ತೊಂದು ಬೈಕಿನಲ್ಲಿ ಬೇಲೂರು ಕಡೆಯಿಂದ ಹಾಸನಕ್ಕೆ ಸಂದೀಪ ಹಾಗೂ ಪ್ರವೀಣ ಹೋಗುತ್ತಿದ್ದಾಗ ಎರಡು ಬೈಕುಗಳು ಪರಸ್ಪರ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಹರೀಶ್‌ನಾಯ್ಕ, ಸಂದೀಪ ಸ್ಥಳದಲ್ಲಿಯೇ ಮೃತಪಟ್ಟರೆ, ಆನಂದ ಆಸ್ಪತ್ರೆಯಲ್ಲಿ ಮೃತಪಟ್ಟರು. ಗಾಯಾಳು ಪ್ರವೀಣ ಅವರನ್ನು ಹಾಸನದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮತ್ತೊಂದು ಪ್ರಕರಣದಲ್ಲಿ ಮಣ್ಣು ತುಂಬಿದ್ದ ಟ್ರ್ಯಾಕ್ಟರ್‌ವೊಂದು ಪಾದಚಾರಿಗೆ ಡಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟಿರುವ ಘಟನೆ ಮಂಗಳವಾರ ಸಂಜೆ ಅಡಗೂರು ಬಳಿಯ ಆಲದಹಳ್ಳಿ ನಡೆದಿದೆ

ಆಲದಹಳ್ಳಿ ಪವನ್(14) ಮೃತಪಟ್ಟವರು. ಇವರು ತೋಟಕ್ಕೆ ಹೋಗುತ್ತಿದ್ದಾಗ ಅಡಗೂರು ಕೆರೆಯಿಂದ ಮಣ್ಣು ತುಂಬಿಕೊಂಡು ಬರುತ್ತಿದ್ದ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ.

ಹಳೆಬೀಡು ಪಿ.ಎಸ್.ಐ. ರವಿಕುಮಾರ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT