ಮಂಡ್ಯ: ಕೆಆರ್ಎಸ್ ಜಲಾಶಯ ಹಾಗೂ ಬೃಂದಾವನ ವೀಕ್ಷಣೆಗೆ ಪ್ರವಾಸಿಗರಿಗೆ ವಿಧಿಸಿದ್ದ ನಿರ್ಬಂಧವನ್ನು ಅ. 14ರಿಂದ ಜಾರಿಗೆ ಬರುವಂತೆ ಹಿಂತೆಗೆದುಕೊಳ್ಳಲಾಗಿದೆ.
ಕಾವೇರಿ ಹೋರಾಟದ ಹಿನ್ನೆಲೆಯಲ್ಲಿ ಈ ಸ್ಥಳಗಳ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿತ್ತು. ಆದರೆ ಹೋರಾಟ ತಾತ್ಕಾಲಿಕವಾಗಿ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ನಿರ್ಬಂಧ ತೆರವು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಎನ್. ಕೃಷ್ಣಯ್ಯ ತಿಳಿಸಿದ್ದಾರೆ.