ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಸನ್ನಕುಮಾರ್‌ ನಾಪತ್ತೆ

ಕೆಜೆಪಿ ಸಂಸ್ಥಾಪಕ ಅಧ್ಯಕ್ಷ
Last Updated 14 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಜನತಾ ಪಕ್ಷದ (ಕೆಜೆಪಿ) ಸಂಸ್ಥಾಪಕ ಅಧ್ಯಕ್ಷ ಪದ್ಮನಾಭ ಪ್ರಸನ್ನಕುಮಾರ್‌ ಕಾಣೆ­ಯಾಗಿ­ದ್ದು, ಈ ಸಂಬಂಧ ಅವರ ತಂದೆ ನಂಜುಂಡಪ್ಪ ಅವರು ಇಲ್ಲಿನ ಅಶೋಕ­ನಗರ ಠಾಣೆಯಲ್ಲಿ ಶನಿವಾರ ದೂರು ದಾಖಲಿಸಿದ್ದಾರೆ.

‘ಯಡಿಯೂರಪ್ಪ ಅವರ ಡಾಲರ್ಸ್‌ ಕಾಲೊನಿ ನಿವಾಸದಲ್ಲಿ ಕರೆ­ದಿರುವ ಸಭೆಗೆ ಹೋಗುವುದಾಗಿ ತಿಳಿಸಿ ಸೋಮವಾರ (ಡಿ.9) ಬೆಳಿಗ್ಗೆ ಮನೆ­ಯಿಂದ ಹೋಗಿದ್ದ ಮಗ ವಾಪಸ್‌ ಬಂದಿ­ಲ್ಲ’ ಎಂದು ನಂಜುಂಡಪ್ಪ ಅವರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ‘ಮಗ, ಯಡಿಯೂರಪ್ಪ­ನವರ ಸಭೆ ಮುಗಿದ ಬಳಿಕ ಮಧ್ಯಾಹ್ನ ಊಟಕ್ಕೆ ಮನೆ­ಗೆ ಬರುತ್ತೇನೆ ಎಂದು ಹೇಳಿ ಹೋಗಿದ್ದ. ಆತ ಮೊಬೈಲ್‌ ಸಹ ತೆಗೆದುಕೊಂಡು ಹೋಗಿಲ್ಲ’ ಎಂದು ನಂಜುಂಡಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು.

‘ಇದೇ ರೀತಿ ಆಗಾಗ್ಗೆ ಮನೆಯಿಂದ ಹೊರ ಹೋಗುತ್ತಿದ್ದ ಆತ ಮೂರ್ನಾಲ್ಕು ದಿನಗಳಲ್ಲಿ ವಾಪಸ್‌ ಬರುತ್ತಿದ್ದ. ಆದರೆ, ಈ ಬಾರಿ ಆರು ದಿನವಾದರೂ ವಾಪಸ್‌ ಬಂದಿಲ್ಲ ಮತ್ತು ಕರೆ ಸಹ ಮಾಡಿಲ್ಲ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT