ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಾಣಿ ಬೇಟೆಗೆ ಹೊಂಚು;9 ಆರೋಪಿಗಳ ಬಂಧನ

Last Updated 29 ಆಗಸ್ಟ್ 2011, 19:30 IST
ಅಕ್ಷರ ಗಾತ್ರ

ಕಡೂರು:  ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನ ಪಂಚನಹಳ್ಳಿ ಹೋಬಳಿ  ತಿಮ್ಲಾಪುರ-ಬಿಟ್ಟೇನಹಳ್ಳಿ ಅರಣ್ಯ ಪ್ರದೇಶದಲ್ಲಿ ಕಾಡು ಪ್ರಾಣಿಗಳ ಬೇಟೆಗೆ ಹೊಂಚುಹಾಕುತ್ತಿದ್ದ ಹಾಸನ ಜಿಲ್ಲೆ ಅಲೂರು ಮೂಲದ 9 ಆರೋಪಿಗಳನ್ನು ಪಂಚನಹಳ್ಳಿ ಪೊಲೀಸರು ಭಾನುವಾರ ತಡರಾತ್ರಿ ಬಂಧಿಸಿದರು.

ಬೇಟೆಗಾರರ ತಂಡ ತಂದಿದ್ದ ಟಾಟಾ ಸುಮೊ, 4 ನಾಡಕೋವಿ, 2 ಕತ್ತಿ, ಬ್ಯಾಟರಿ, ಮದ್ದು ಗುಂಡು ಹಾಗೂ 8 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ಕಡೂರು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನಂತರ ಎಲ್ಲರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು ಎಂದು ಸಬ್ ಇನ್ಸ್‌ಪೆಕ್ಟರ್ ಗೀತಾಬಾಯಿ ಪ್ರಜಾವಾಣಿಗೆ ವಿವರ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT