ಬೆಂಗಳೂರು: ಗ್ರಾ.ಪಂ.ಗಳಲ್ಲಿ ಪ್ರೇರಕರಾಗಿ ಕೆಲಸ ನಿರ್ವಹಿಸುತ್ತಿರುವವರ ಸೇವೆಯನ್ನು ಕಾಯಂಗೊಳಿಸಿ, ಗೌರವಧನ ಹೆಚ್ಚಿಸಬೇಕು ಎಂದು ರಾಜ್ಯ ಸಾಕ್ಷರತಾ ಪ್ರೇರಕರ ಒಕ್ಕೂಟದ ವಿ.ವೆಂಕಟೇಶ್ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 1991-92ರಿಂದಲೂ ಸರ್ಕಾರದ ವಿವಿಧ ಕಾರ್ಯಕ್ರಮಗಳಲ್ಲಿ ಪ್ರೇರಕರಾಗಿ ಕೆಲಸ ನಿರ್ವಹಿಸುತ್ತಾ ಬಂದಿದ್ದರೂ, ಉದ್ಯೋಗದ ಭದ್ರತೆ ಇಲ್ಲ. ಗ್ರಾ.ಪಂ. ನೌಕರರಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದರು.