ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರೊಬೇಸ್-12 ಉದ್ಘಾಟನೆ

Last Updated 3 ಜುಲೈ 2012, 8:05 IST
ಅಕ್ಷರ ಗಾತ್ರ

ಮೈಸೂರು: `ಉತ್ತಮ ಸಮಾಜ ನಿರ್ಮಾಣ ಕಾರ್ಯದಲ್ಲಿ ಸಾಮಾಜಿಕ ಕಾರ್ಯಕರ್ತರ ಪಾತ್ರ ಪ್ರಮುಖ~ ಎಂದು ನಗರ ಪೊಲೀಸ್ ಆಯುಕ್ತ ಕೆ.ಎಸ್. ಸುಧೀರ್ ಹೇಳಿದರು.

ನಗರದ ವಿವೇಕಾನಂದ ಇನ್‌ಸ್ಟಿಟ್ಯೂಟ್ ಫಾರ್ ಲೀಡರ್‌ಶಿಫ್ ಡೆವಲಪ್‌ಮೆಂಟ್ (ವಿ-ಲೀಡ್) ಆವರಣದಲ್ಲಿ ಸೋಮವಾರ ಆಯೋ ಜಿದ್ದ `ಪ್ರೊಬೇಸ್-12~ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕುಟುಂಬದಲ್ಲಿ ಮೌಲ್ಯಗಳು ಮರೆಯಾಗುತ್ತಿವೆ. ಇದು ಸಾಮಾಜಿಕ ಸ್ಥಿತಿಯ ಮೇಲೆ ಪರಿಣಾಮ ಬೀರುತ್ತಿದೆ. ಇದನ್ನು ನಿವಾರಿಸುವ ನಿಟ್ಟಿನಲ್ಲಿ `ವೀ-ಲೀಡ್~ ಸಂಸ್ಥೆ ಸಮು ದಾಯ ಮತ್ತು ಯುವಕರ ಅಭಿವೃದ್ಧಿಯಲ್ಲಿ ಸಾಕಷ್ಟು ಸೇವೆ ಸಲ್ಲಿಸುತ್ತಿದೆ ಎಂದು ತಿಳಿಸಿದರು.

ರಾಜ್ಯದ ವಿವಿಧ ವಿಶ್ವವಿದ್ಯಾಲ ಯಗಳ ಸಮಾಜ ಕಾರ್ಯ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಸಾಮಾಜಿಕ ಅಭಿವೃದ್ಧಿ ವಿಷಯಗಳ ಬಗ್ಗೆ `ವೀ-ಲೀಡ್~ನಲ್ಲಿ ಪ್ರಾಯೋಗಿಕ ಅಧ್ಯಯನ ಕೈಗೊಂಡಿದ್ದಾರೆ. ಈ ಶಿಬಿರ ಜುಲೈ 31ರ ವರೆಗೆ ನಡೆಯಲಿದೆ.

ಉದ್ಘಾಟನಾ ಸಮಾರಂಭದಲ್ಲಿ ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಸಂಸ್ಥಾಪಕ ಡಾ. ಆರ್. ಬಾಲಸುಬ್ರಹ್ಮಣ್ಯಂ, ನಿರ್ದೇಶಕ ಸುದರ್ಶನ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT