ಇಸ್ಲಾಮಾಬಾದ್(ಪಿಟಿಐ): ಮುಂಬೈ ದಾಳಿ ಪ್ರಕರಣದ ಶಂಕಿತ ಆರೋಪಿ ಎಲ್ಇಟಿಯ ಝಾಕೀರ್ ರೆಹಮಾನ್ ಲಖ್ವಿ ಸೇರಿದಂತೆ ಆರು ಮಂದಿಯ ಬಗ್ಗೆ ವಿಚಾರಣೆ ನಡೆಸುತ್ತಿರುವ ಭಯೋತ್ಪಾದಕ ನಿಗ್ರಹ ಕೋರ್ಟ್ ವಿಚಾರಣೆಯನ್ನು ಫೆಬ್ರುವರಿ 4ಕ್ಕೆ ಮುಂದೂಡಿದೆ.
ರಾವಲ್ಪಿಂಡಿಯಲ್ಲಿರುವ ಭಯೋತ್ಪಾದನಾ ನಿಗ್ರಹ ಕೋರ್ಟ್ನ ನ್ಯಾಯಾಧೀಶ ರಾಣಾ ನಿಸಾರ್ ಅಹಮದ್ ಅವರು ವಿಚಾರಣೆಯನ್ನು ಹಲವು ಬಾರಿ ಮುಂದೂಡಿದ್ದಾರೆ.