ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಡವರ ಹಿತ ಕಾಪಾಡುವಲ್ಲಿ ವಿಫಲ

ಬಿಜೆಪಿ ಉಪಾಧ್ಯಕ್ಷ ಸದಾನಂದಗೌಡ ಆರೋಪ
Last Updated 8 ಏಪ್ರಿಲ್ 2013, 20:00 IST
ಅಕ್ಷರ ಗಾತ್ರ

ವೈಟ್‌ಫೀಲ್ಡ್: ದೇಶದ ಬಡಜನರ ಹಿತಕಾಪಾಡುವಲ್ಲಿ ಕೇಂದ್ರದ ಯುಪಿಎ ಸರ್ಕಾರ ಎಲ್ಲ ಹಂತದಲ್ಲೂ ವಿಫಲ ಆಗಿದೆ ಎಂದು ರಾಷ್ಟ್ರೀಯ ಬಿಜೆಪಿ ಉಪಾಧ್ಯಕ್ಷ ಸದಾನಂದಗೌಡ ಆರೋಪಿಸಿದರು.

ಮಹದೇವಪುರ ಬಿಜೆಪಿ ಘಟಕವು ಈಚೆಗೆ  ಏರ್ಪಡಿಸಿದ್ದ ಸಾರ್ವಜನಿಕ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು.

ದೇಶದಲ್ಲಿ ಶೇ.38 ರಷ್ಟು ಕುಟುಂಬಗಳು ಬಡತನ ರೇಖೆಗಿಂತ ಕೆಳಗಿವೆ. ವಾಜಪೇಯಿ ಪ್ರಧಾನಿ ಆಗಿದ್ದಾಗ ಕೇವಲ ಒಂದು ಬಾರಿ ಅನಿವಾರ್ಯವಾಗಿ ಬೆಲೆ ಏರಿಕೆ ಮಾಡಿದಾಗ ಪ್ರತಿಭಟಿಸಿದ ಕಾಂಗ್ರೆಸ್ಸಿಗರು ಈಗ ಲೆಕ್ಕವಿಲ್ಲದಷ್ಟು ಬಾರಿ ಬೆಲೆಏರಿಕೆ ಮಾಡುತ್ತಿದ್ದಾರೆ. ಈ ಬಗ್ಗೆ ಅರಿವಿಲ್ಲವೇ?ಎಂದು ಪ್ರಶ್ನಿಸಿದರು.

ರಾಜಕೀಯ ಇಚ್ಚಾಶಕ್ತಿ: ಕಾಂಗ್ರೆಸ್ ಪಕ್ಷಕ್ಕೆ ಅಭಿವೃದ್ಧಿಯ ದೃಷ್ಟಿಕೋನವಿಲ್ಲ. ನೆಪ ಮಾತ್ರಕ್ಕೆ ಪ್ರಧಾನಿ ಆಗಿರುವ ಮನಮೋಹನ ಸಿಂಗ್ ಅವರು `ಮೌನ ಮೋಹನಸಿಂಗ್' ಆಗ್ದ್ದಿದಾರೆ  ಎಂದು ಅವರು ಲೇವಡಿ ಮಾಡಿದರು.

ನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಚ್ಚಿದಾನಂದಮೂರ್ತಿ, ಖಜಾಂಚಿ ಶೇಖರರೆಡ್ಡಿ ಇತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT