ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಬ್ರುವಾಹನ ಯಕ್ಷಗಾನ ವೈಭವ

Last Updated 3 ಜುಲೈ 2012, 19:30 IST
ಅಕ್ಷರ ಗಾತ್ರ

ನಾಗರಬಾವಿಯಲ್ಲಿರುವ ಕೆನರಾ ಬ್ಯಾಂಕ್ ಕಾಲೊನಿಯ ಶ್ರೀ ವರಸಿದ್ಧಿ ವಿನಾಯಕ ದೇವಾಲಯದ 24ನೇ ವಾರ್ಷಿಕೋತ್ಸವ ಪ್ರಯುಕ್ತ ಇತ್ತೀಚೆಗೆ ಬ್ರಹ್ಮ ಕಲಶೋತ್ಸವ ಹಾಗೂ ಕುಂಭಾಭಿಷೇಕ ಮಹೋತ್ಸವ ನಡೆಯಿತು. ಇದರ ಅಂಗವಾಗಿ ಮೂರು ದಿನ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಮೊದಲನೇ ದಿನ ಬೇಗಾರು ಶಿವಕುಮಾರ್ ಅವರ ನಿರ್ದೇಶನದಲ್ಲಿ ಗಾನ ಸೌರಭ ಕಲಾಶಾಲೆ ತಂಡದಿಂದ `ವೀರ ಬಬ್ರುವಾಹನ~ ಯಕ್ಷಗಾನ ಪ್ರದರ್ಶನ, ಎರಡನೇ ದಿನ ವಿದ್ಯಾಭೂಷಣ ಅವರಿಂದ ನಡೆದ `ಭಕ್ತಿ ರಸ ಸಂಜೆ~  ಕಾರ್ಯಕ್ರಮ ಭಕ್ತರನ್ನು ರಂಜಿಸಿತು.

ಮೂರನೇ ದಿನ ಪೇಜಾವರ ಮಠಾಧೀಶರಾದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರಿಂದ ಕಲಶಾಭಿಷೇಕ ಕಾರ್ಯಕ್ರಮ ನಡೆಯಿತು. ಜೊತೆಗೆ ಎಂ.ಎ. ಜಯರಾಮ್ ಅವರಿಂದ ಕುಂಭಾಭಿಷೇಕ ಮಹತ್ವ ಕುರಿತು ಉಪನ್ಯಾಸ ಏರ್ಪಡಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT