ಇದೇ ಪರಿಸ್ಥಿತಿ ಮುಂದುವರಿದಲ್ಲಿ ಮುಂದಿನ ಎರಡು ರಾತ್ರಿ ಶೀತ ಗಾಳಿ ಬೀಸುವ ಸಂಭವವಿದೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಬಿ.ಪುಟ್ಟಣ್ಣ ‘ಪ್ರಜಾವಾಣಿ’ಗೆ ತಿಳಿಸಿದರು. ‘ಚಂಡಮಾರುತದ ಪ್ರಭಾವ ಪೂರ್ವ ಕರಾವಳಿಯಲ್ಲಿ ಅಷ್ಟಾಗಿ ಪ್ರಭಾವ ಇರುವುದಿಲ್ಲ. ತಮಿಳುನಾಡು ಮತ್ತು ಆಂಧ್ರ ಕರಾವಳಿಯಲ್ಲಿ ತುಂತುರು ಮಳೆಯಾ ಗಲಿದ್ದು, ಮೋಡ ಮುಸುಕಿದ ವಾತಾವರಣ ಇರಲಿದೆ’ ಎಂದರು.
ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಪ್ರತಿ ವರ್ಷ ಡಿಸೆಂಬರ್ ಮೊದಲ ವಾರದಲ್ಲಿ ದಾಖಲಾಗುವ ಸರಾಸರಿ ಉಷ್ಣಾಂಶಕ್ಕಿಂತ ಈ ಸಲ 5ರಿಂದ 6 ಡಿಗ್ರಿ ಸೆಲ್ಷಿಯಸ್ನಷ್ಟು ಕಡಿಮೆಯಾಗಿದೆ. ರಾಯಚೂರಿನಲ್ಲಿ 11.4, ವಿಜಾಪುರ 11.5, ಬೆಳಗಾವಿ ವಿಮಾನ ನಿಲ್ದಾಣ 11.6, ಬಾಗಲಕೋಟೆ 11.8 ಡಿಗ್ರಿ ಉಷ್ಣಾಂಶ ದಾಖಲಾಗಿದೆ. ಸಾಮಾನ್ಯವಾಗಿ ಈ ಜಿಲ್ಲೆಗಳಲ್ಲಿ ಈ ಅವಧಿಯಲ್ಲಿ ಕನಿಷ್ಠ ಉಷ್ಣಾಂಶ 17 ರಿಂದ 19 ಡಿಗ್ರಿ ಸೆಲ್ಷಿಯಸ್ ಇರುತ್ತದೆ.