ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬರ ಪರಿಹಾರದಲ್ಲಿ ತಾರತಮ್ಯ ಬೇಡ

Last Updated 3 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳು ಬರದ ಪರಿಸ್ಥಿತಿ ಎದುರಿಸುತ್ತಿವೆ. ಚಿತ್ರದುರ್ಗ ಜಿಲ್ಲೆಯಲ್ಲಿ ವರ್ಷಕ್ಕೆ ಸರಾಸರಿ 254.0 ಮಿ ಮೀ ಮಳೆಯಾಗಬೇಕಿತ್ತು. ಆದರೆ ಈ ವರ್ಷ 169.6 ಮಿ ಮೀ ಮಳೆಯಾಗಿದೆ. 33 ಮಿ ಮೀ ಕೊರತೆ ಇದೆ. 

ಈಗಾಗಲೇ ಮಳೆಯ ಅಭಾವದಿಂದ ಅನೇಕ ಬೆಳೆಗಳು ಒಣಗುತ್ತಿವೆ. ಅಪಾರ ಬೆಳೆ ನಷ್ಟವಾಗಿದೆ. ಇನ್ನೇನು ಕೆಲವೇ ತಿಂಗಳು ಹೀಗೆ ಮಳೆ ಕೈಕೊಟ್ಟರೆ ಈ ಜಿಲ್ಲೆಗಳಲ್ಲಿ ಕುಡಿಯಲು ಸಹ ನೀರು ಸಿಗದಂತಹ ಪರಿಸ್ಥಿತಿ ನಿರ್ಮಾಣ ವಾಗಲಿದೆ.

ಸರ್ಕಾರ ಈಗ 5ಕೋಟಿ ಪರಿಹಾರ ಹಾಗೂ ಚಿತ್ರದುರ್ಗ ಜಿಲ್ಲೆಯ 4 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಿರುವುದು ಸ್ವಾಗತಾರ್ಹ. ಆದರೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲೂ ಬರಸ್ಥಿತಿಯೆ ಇದೆ. ಆದ್ದರಿಂದ ಈ ಬಗೆಗೆ ಸರ್ಕಾರ ತನ್ನ ನಿರ್ಧಾರವನ್ನು ಪುನರ್‌ಪರಿಶೀಲಿಸಿ ಉಳಿದ ತಾಲ್ಲೂಕುಗಳ ಜನರ ಸಂಕಷ್ಟಕ್ಕೆ ಸ್ಪಂದಿಸಬೇಕಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT