ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬರಪೀಡಿತ ತಾಲ್ಲೂಕುಗಳ ಸಂಖ್ಯೆ 84ಕ್ಕೆ

Last Updated 7 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಇನ್ನೂ 14 ತಾಲ್ಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಶುಕ್ರವಾರ ಘೋಷಿಸಿದೆ. ಇದರಿಂದ ಬರಪೀಡಿತ ತಾಲ್ಲೂಕುಗಳ ಸಂಖ್ಯೆ 84ಕ್ಕೆ ಏರಿದೆ.

ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆ ಆಗಿರುವ 21 ಜಿಲ್ಲೆಗಳ ಒಟ್ಟು 70 ತಾಲ್ಲೂಕುಗಳನ್ನು ಸರ್ಕಾರ ಮಂಗಳವಾರವಷ್ಟೇ `ಬರಪೀಡಿತ~ ಪಟ್ಟಿಗೆ ಸೇರಿಸಿತ್ತು. ಆ ಪಟ್ಟಿಗೆ ಹೊಸದಾಗಿ 14 ತಾಲ್ಲೂಕುಗಳು ಸೇರಿಕೊಂಡಿವೆ.

ಗೃಹ ಕಚೇರಿ `ಕೃಷ್ಣಾ~ದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು, `ಇದೇ ಜೂನ್ 1ರಿಂದ ಅಕ್ಟೋಬರ್ 3ರ ನಡುವಿನ ಅವಧಿಯಲ್ಲಿ ರಾಜ್ಯದ ಒಂಬತ್ತು ಜಿಲ್ಲೆಗಳ ವ್ಯಾಪ್ತಿಯ ಈ 14 ತಾಲ್ಲೂಕುಗಳಲ್ಲಿಯೂ ಮಳೆ ಮತ್ತು ತೇವಾಂಶದ ಕೊರತೆ ಕಂಡುಬಂದಿದೆ. ಈ ತಾಲ್ಲೂಕುಗಳ ನೀರಾವರಿ ಅಚ್ಚುಕಟ್ಟು ಪ್ರದೇಶ ಹೊರತುಪಡಿಸಿ ಉಳಿದ ಪ್ರದೇಶಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ~ ಎಂದರು.




 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT