ಬಳ್ಳಾರಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಕಾರ್ಯಕರ್ತರ ರಾಜ್ಯ ಮಟ್ಟದ ಬೈಠಕ್ ನಗರದ ಕೊಟ್ಟೂರು ಸ್ವಾಮಿ ಮಠದ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಆರಂಭವಾಯಿತು.
ನಾಲ್ಕು ದಿನಗಳ ಕಾಲ ನಡೆಯುವ ಈ ಬೈಠಕ್ನಲ್ಲಿ ರಾಜ್ಯದ 150ಕ್ಕೂ ಹೆಚ್ಚು ಪ್ರಮುಖ ಮುಖಂಡರು ಹಾಗೂ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್ ಪಾಲ್ಗೊಂಡಿದ್ದಾರೆ.
ಸಂಘ ಪರಿವಾರದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿರುವ ಬಿಜೆಪಿಯ ರಾಜ್ಯ, ರಾಷ್ಟ್ರೀಯ ಘಟಕಗಳ ಪ್ರಮುಖರು ಶನಿವಾರ ನಡೆಯುವ ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.
ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಜಗದೀಶ ಶೆಟ್ಟರ್, ಸದಾನಂದಗೌಡ ಭಾಗವಹಿಸಲಿದ್ದಾರೆ.