ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಳ್ಳಾರಿ: ಆರ್‌ಎಸ್‌ಎಸ್‌ ಬೈಠಕ್‌ ಆರಂಭ

Last Updated 13 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಬಳ್ಳಾರಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಕಾರ್ಯ­ಕರ್ತರ ರಾಜ್ಯ ಮಟ್ಟದ ಬೈಠಕ್‌ ನಗರದ ಕೊಟ್ಟೂರು ಸ್ವಾಮಿ ಮಠದ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಆರಂಭವಾಯಿತು.

ನಾಲ್ಕು ದಿನಗಳ ಕಾಲ ನಡೆಯುವ ಈ ಬೈಠಕ್‌ನಲ್ಲಿ ರಾಜ್ಯದ 150ಕ್ಕೂ ಹೆಚ್ಚು ಪ್ರಮುಖ ಮುಖಂಡರು ಹಾಗೂ ಸಂಘಟನೆಯ ಮುಖ್ಯಸ್ಥ ಮೋಹನ್‌ ಭಾಗವತ್ ಪಾಲ್ಗೊಂಡಿದ್ದಾರೆ.

ಸಂಘ ಪರಿವಾರದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿರುವ ಬಿಜೆಪಿಯ ರಾಜ್ಯ, ರಾಷ್ಟ್ರೀಯ ಘಟಕಗಳ ಪ್ರಮು­ಖರು ಶನಿವಾರ ನಡೆಯುವ ಸಭೆ­ಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.

ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತಕುಮಾರ್‌,  ಮಾಜಿ ಮುಖ್ಯಮಂತ್ರಿಗಳಾದ ಜಗದೀಶ ಶೆಟ್ಟರ್‌, ಸದಾನಂದಗೌಡ ಭಾಗವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT