ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಳ್ಳಾರಿ ಮತ ಮರು ಎಣಿಕೆ: ಹೈಕೋರ್ಟ್‌ನಿಂದ ಅರ್ಜಿ ವಜಾ

Last Updated 10 ಡಿಸೆಂಬರ್ 2012, 19:38 IST
ಅಕ್ಷರ ಗಾತ್ರ

ಬೆಂಗಳೂರು: ಬಳ್ಳಾರಿ ಲೋಕಸಭಾ ಕ್ಷೇತ್ರದ ಮತಗಳ ಮರು ಎಣಿಕೆ ನ್ಯಾಯಾಲಯದ ನಿರ್ದೇಶನದಂತೆ ನಡೆದಿಲ್ಲ ಎಂದು ದೂರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಸೋಮವಾರ ವಜಾ ಮಾಡಿದೆ.

ಎಂ. ಚಂದ್ರೇಗೌಡ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್. ಬಿಳ್ಳಪ್ಪ ಅವರು, `ಮರು ಎಣಿಕೆ ನ್ಯಾಯಾಲಯದ ನಿರ್ದೇಶನದಂತೆ ನಡೆದಿದೆ. ಈ ಸಂಬಂಧ ಜಿಲ್ಲಾಧಿಕಾರಿಗಳು ವರದಿ ನೀಡಿದ್ದಾರೆ. ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿನ ಫಲಿತಾಂಶ ಹಾಗೂ ಮರು ಎಣಿಕೆ ಫಲಿತಾಂಶದ ನಡುವೆ ವ್ಯತ್ಯಾಸ ಕಂಡುಬಂದಿಲ್ಲ' ಎಂದು ಹೇಳಿ ಅರ್ಜಿ ವಜಾ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT