ಬಳ್ಳಾರಿ: ಅಕ್ರಮ ಗಣಿಗಾರಿಕೆಯಿಂದ ಜಿಲ್ಲೆಯ ಅರಣ್ಯ ಮತ್ತು ಪರಿಸರದ ಮೇಲೆ ಉಂಟಾದ ದುಷ್ಪರಿಣಾಮಗಳ ಕುರಿತು ಅಧ್ಯಯನ ನಡೆಸುವ ಉದ್ದೇಶದಿಂದ, ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಜಿಲ್ಲೆಗೆ ಆಗಮಿಸಿರುವ ಕೇಂದ್ರದ ಪರಿಸರ ಅಧ್ಯಯನ ತಂಡವು, ಗುರುವಾರ ಹೊಸಪೇಟೆ ಬಳಿಯ ಆರ್ ಬಿಎಸ್ಎಸ್ ಎನ್ ಗಣಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.