ಬಳ್ಳಾರಿ (ಐಎಎನ್ಎಸ್): ಅಕ್ರಮ ಗಣಿಗಾರಿಕೆ ಆರೋಪದ ಮೇಲೆ ಬಂಧನದಲ್ಲಿರುವ ಮಾಜಿ ಸಚಿವ ಜಿ. ಜನಾರ್ದನ ರೆಡ್ಡಿ ಅವರ ಆಪ್ತರಿಗೆ ಸೇರಿದ ಕಚೇರಿ, ನಿವಾಸಗಳ ಮೇಲೆ ಎರಡನೇಯ ದಿನವಾದ ಮಂಗಳವಾರ ಸಹ ಸಿಬಿಐ ಅಧಿಕಾರಿಗಳು ದಾಳಿ ಮುಂದುವರಿಸಿದ್ದಾರೆ.
ಬಳ್ಳಾರಿ ಪಟ್ಟಣ ಸೇರಿದಂತೆ ಹೊಸಪೇಟೆ ಮತ್ತು ತೋರಣಗಲ್ನಲ್ಲಿ ಹಲವು ಗಣಿ ಕಂಪೆನಿಗಳ ಮೇಲೆ ದಾಳಿ ನಡೆದಿದೆ ಎಂದು ಸಿಬಿಐ ವಕ್ತಾರರು ತಿಳಿಸಿದ್ದಾರೆ.
ಬಳ್ಳಾರಿಯಲ್ಲಿರುವ ಬಿ.ನಾಗಪ್ಪ ಗಣಿ ಕಂಪೆನಿಯ ಮಾಲಿಕರಾದ ಶಾಂತಲಕ್ಷ್ಮಿ ಜಯರಾಂ ಅವರ ನಿವಾಸ ಹಾಗೂ ಸಾರಿಗೆ ಸಂಸ್ಥೆಯೊಂದರ ಮೇಲೆ ದಾಳಿ ಮುಂದುವರಿದಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ.