ಉತ್ತರಹಳ್ಳಿಯಿಂದ ಶ್ರೀನಗರಕ್ಕೆ ಹಾಗೂ ಉತ್ತರಹಳ್ಳಿಯಿಂದ ವಿದ್ಯಾಪೀಠಕ್ಕೆ ನೇರ ಬಸ್ ವ್ಯವಸ್ಥೆ ಇಲ್ಲವಾಗಿದೆ. ಉತ್ತರಹಳ್ಳಿ, ಕೆ.ಎಸ್.ಆರ್.ಟಿ.ಸಿ. ಬಡಾವಣೆ ಹಾಗೂ ಚಿಕ್ಕಲಸಂದ್ರದ ನಾಗರಿಕರು ವಿದ್ಯಾಪೀಠ ಹಾಗೂ ಶ್ರೀನಗರಕ್ಕೆ ಹೋಗಲು ನೇರವಾಗಿ ಬಸ್ ವ್ಯವಸ್ಥೆ ಇಲ್ಲ.
ಇದರಿಂದ ನಿತ್ಯ ನೂರಾರು ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಈ ಕುರಿತಂತೆ ಸಬಂಧಪಟ್ಟವರಿಗೆ ಪತ್ರ ಬರೆದಿದ್ದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಇನ್ನಾದರೂ ಸಂಬಂಧಪಟ್ಟವರು ಬಸ್ ವ್ಯವಸ್ಥೆ ಕಲ್ಪಿಸಿ, ನಿಗದಿತ ಸಮಯದ ಬಗ್ಗೆ ಮಾಹಿತಿ ನೀಡಬೇಕಾಗಿ ವಿನಂತಿ.