ನಾಗಪುರ (ಪಿಟಿಐ): ಯಾಂತ್ರಿಕ ದೋಷದಿಂದಾಗಿ ಬಸ್ಸಿನಲ್ಲಿ ಬೆಂಕಿ ಹೊತ್ತಿಕೊಂಡು ಪರಿಣಾಮ ಎಂಟು ಮಂದಿ ಸಜೀವ ದಹನವಾದ ಘಟನೆ ಸಮೀಪದ ಹೆದ್ದಾರಿಯಲ್ಲಿ ಶನಿವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸತ್ತರವರಲ್ಲಿ ಇಬ್ಬರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಇದ್ದಾರೆ. ನಾಗಪುರ- ಹಿಂಗಂಘಾಟ್ ಹೆದ್ದಾರಿಯಲ್ಲಿ ಈ ಅವಗಡ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿ ಅಜಯ್ ಅವಾಚತ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
`ಚಾಲಕ ಮತ್ತು ಕ್ಲೀನರ್ ಎಂಜಿನ್ ಪರೀಕ್ಷಿಸುತ್ತಿದ್ದಾಗ ದಿಢೀರನೇ ಬೆಂಕಿ ಹೊತ್ತಿಕೊಂಡಿದ್ದು, ಅವರಿಬ್ಬರು ಅಪಾಯದಿಂದ ಪಾರಾಗಿದ್ದಾರೆ. ಎಂಟು ಮಂದಿ ಬೆಂಕಿಗೆ ಬಲಿಯಾಗಿದ್ದು, ಆರು ಮಂದಿಗೆ ತೀವ್ರಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.