ನಗರದ ಹೊರ ವಲಯದಲ್ಲಿ ನಡೆದ ಹಿಂಸಾಚಾರದಲ್ಲಿ ಆಡಳಿತಾರೂಢ ಪಕ್ಷ ಅವಾಮಿ ಲೀಗ್ನ ಮೂವರು ಬೆಂಬಲಿಗರು ಸೇರಿದಂತೆ ನಾಲ್ವರು ಕೊಲೆಯಾಗಿದ್ದಾರೆ. ಘಟನೆಯಲ್ಲಿ ಇಬ್ಬರು ತೀವ್ರ ಗಾಯಗೊಂಡಿದ್ದಾರೆ.
ಎರಡು ಗುಂಪುಗಳ ಸದಸ್ಯರು ಪರಸ್ಪರ ಕಟ್ಟಿಗೆ, ಬಡಿಗೆಗಳನ್ನು ಹಿಡಿದು ಗಲಾಟೆ ನಡೆಸಿದ್ದಾರೆ. ಇದರೊಂದಿಗೆ ಹಿಂಸಾಚಾರದಲ್ಲಿ ಬಲಿಯಾದವರ ಸಂಖ್ಯೆ 25ಕ್ಕೇರಿದೆ.
ಸಂಸತ್ನ 10ನೇ ಸಾರ್ವತ್ರಿಕ ಚುನಾವಣೆಯಲ್ಲಿ 147 ಸ್ಥಾನಗಳಲ್ಲಿ 139 ಸ್ಥಾನಗಳ ಫಲಿತಾಂಶವನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಮತದಾನದ ವೇಳೆ ಮತಗಟ್ಟೆ ಬಳಿ ನಡೆದ ಗಲಾಟೆ, ಹಿಂಸಾಚಾರದ ಹಿನ್ನೆಲೆಯಲ್ಲಿ ಮರು ಮತದಾನ ನಡೆಯಬೇಕಿರುವುದರಿಂದ 8 ಕ್ಷೇತ್ರಗಳ ಫಲಿತಾಂಶವನ್ನು ತಡೆ ಹಿಡಿಯಲಾಗಿದೆ.