ಯಲಹಂಕ: ದೇಶದಲ್ಲಿ ಬಡಜನರು ನೆಮ್ಮದಿಯಿಂದ ಬದುಕಲು ಖಾಸಗಿ ರಂಗದಲ್ಲಿ ಮೀಸಲಾತಿ ತರಬೇಕು ಎಂದು ಬಹುಜನ ಸಮಾಜ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ ಅಭಿಪ್ರಾಯಪಟ್ಟರು.
ಬಹುಜನ ಸಮಾಜಪಕ್ಷ ಬೆಂಗಳೂರು ಉತ್ತರ ಲೋಕಸಭಾಕ್ಷೇತ್ರ ಘಟಕದ ವತಿಯಿಂದ ಆಯೋಜಿಸಿದ್ದ ಡಾ.ಬಾಬಾಸಾಹೇಬ್ ಅಂಬೇಡ್ಕರ್ರವರ 57ನೇ ಪರಿನಿರ್ವಾಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೇವಲ ಪರಿಶಿಷ್ಟಜಾತಿ ಮತ್ತು ವರ್ಗಕ್ಕಷ್ಟೆ ಅಲ್ಲದೆ ಎಲ್ಲ ಜಾತಿಗಳಲ್ಲಿರುವ ಬಡವರು, ಅಲ್ಪಸಂಖ್ಯಾತರು ಹಾಗೂ ಹಿಂದುಳಿದ ಜನರಿಗೂ ಮೀಸಲಾತಿ ದೊರೆಯಬೇಕು ಎಂದು ಸಲಹೆ ನೀಡಿದರು.
ಎಲ್ಲ ಜಾತಿ, ಧರ್ಮದಲ್ಲಿರುವ ಶೋಷಿತರ ಪರವಾಗಿ ಹೋರಾಟ ಮಾಡಿದ ಮಹಾನ್ ವ್ಯಕ್ತಿ ಅಂಬೇಡ್ಕರ್ ಎಂದು ಬಣ್ಣಿಸಿದರು.