ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಬಾ ಸಾಹೇಬರಿಗೆ ಭಾವಪೂರ್ಣ ನಮನ

Last Updated 6 ಡಿಸೆಂಬರ್ 2013, 19:35 IST
ಅಕ್ಷರ ಗಾತ್ರ

ಯಲಹಂಕ: ದೇಶದಲ್ಲಿ ಬಡಜನರು ನೆಮ್ಮದಿಯಿಂದ ಬದುಕಲು ಖಾಸಗಿ ರಂಗದಲ್ಲಿ ಮೀಸಲಾತಿ ತರಬೇಕು ಎಂದು ಬಹುಜನ ಸಮಾಜ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ ಅಭಿಪ್ರಾಯ­ಪಟ್ಟರು.

ಬಹುಜನ ಸಮಾಜಪಕ್ಷ ಬೆಂಗಳೂರು ಉತ್ತರ ಲೋಕಸಭಾಕ್ಷೇತ್ರ ಘಟಕದ ವತಿಯಿಂದ ಆಯೋಜಿಸಿದ್ದ ಡಾ.ಬಾಬಾಸಾಹೇಬ್‌ ಅಂಬೇಡ್ಕರ್‌­ರವರ 57ನೇ ಪರಿನಿರ್ವಾಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೇವಲ ಪರಿಶಿಷ್ಟಜಾತಿ ಮತ್ತು ವರ್ಗಕ್ಕಷ್ಟೆ ಅಲ್ಲದೆ ಎಲ್ಲ ಜಾತಿ­ಗಳಲ್ಲಿರುವ ಬಡವರು, ಅಲ್ಪ­ಸಂಖ್ಯಾತರು ಹಾಗೂ ಹಿಂದುಳಿದ ಜನರಿಗೂ ಮೀಸಲಾತಿ ದೊರೆಯಬೇಕು ಎಂದು ಸಲಹೆ ನೀಡಿದರು.

ಎಲ್ಲ ಜಾತಿ, ಧರ್ಮದಲ್ಲಿರುವ ಶೋಷಿತರ ಪರವಾಗಿ ಹೋರಾಟ ಮಾಡಿದ ಮಹಾನ್‌ ವ್ಯಕ್ತಿ ಅಂಬೇಡ್ಕರ್ ಎಂದು ಬಣ್ಣಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT