ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಸೋರ್: `ಅಸ್ತ್ರ' ಕ್ಷಿಪಣಿ ಯಶಸ್ವಿ ಉಡ್ಡಯನ

Last Updated 22 ಡಿಸೆಂಬರ್ 2012, 19:59 IST
ಅಕ್ಷರ ಗಾತ್ರ

ಬಾಲಸೋರ್ (ಒಡಿಶಾ)(ಪಿಟಿಐ): ದೇಸಿಯವಾಗಿ ಅಭಿವೃದ್ಧಿಪಡಿಸಿದ `ಅಸ್ತ್ರ' ಕ್ಷಿಪಣಿಯನ್ನು ಇಲ್ಲಿನ ಚಂಡೀಪುರ ಪರೀಕ್ಷಾ ಕೇಂದ್ರದಿಂದ ಶನಿವಾರ ಯಶಸ್ವಿಯಾಗಿ ಉಡಾಯಿಸಲಾಯಿತು.


ಈ ಸುಸಜ್ಜಿತ ಕ್ಷಿಪಣಿಯನ್ನು ಚಂಡೀಪುರ ಪರೀಕ್ಷಾ ಕೇಂದ್ರದ ಎರಡನೇ ಉಡಾವಣಾ ಕೇಂದ್ರದಿಂದ ಬೆಳಿಗ್ಗೆ 3.34ಕ್ಕೆ ಉಡಾಯಿಸಲಾಯಿತು. ಇದೇ ಕ್ಷಿಪಣಿಯನ್ನು ಶುಕ್ರವಾರ ಕೂಡ ಪರೀಕ್ಷಾರ್ಥವಾಗಿ ಯಶಸ್ವಿಯಾಗಿ ಉಡಾಯಿಸಲಾಗಿತ್ತು. `ಕ್ಷಿಪಣಿ ಪರೀಕ್ಷಾರ್ಥ ಉಡಾವಣೆ ಯಶಸ್ವಿಯಾಗಿದೆ ಎಂದು ಪರೀಕ್ಷಾ ಕೇಂದ್ರದ ನಿರ್ದೇಶಕ ಎಂ.ವಿ.ಕೆ.ವಿ ಪ್ರಸಾದ್ ಖಚಿತ ಪಡಿಸಿದ್ದಾರೆ.

ಇಂಧನ ಆಧಾರಿತ `ಅಸ್ತ್ರ' ಕ್ಷಿಪಣಿ ಅತ್ಯಾಧುನಿಕವಾಗಿದ್ದು,  ಸಮಕಾಲೀನ ಬಿವಿಆರ್ ಕ್ಷಿಪಣಿಗಳಿಗಿಂತ ಶಕ್ತಿಶಾಲಿಯಾಗಿ ಕಾರ್ಯ ನಿರ್ವಹಿಸುತ್ತದೆ. ವೈಮಾನಿಕ ಗುರಿಯನ್ನು ನಿಖರವಾಗಿ ತಲುಪುವ ಸಾಮರ್ಥ್ಯ ಹೊಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT