ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲ್ಯ ವಿವಾಹ ತಡೆಗೆ ಕಾರ್ಯಾಗಾರ: ಸಚಿವೆ ಸಲಹೆ

Last Updated 9 ಜನವರಿ 2014, 19:54 IST
ಅಕ್ಷರ ಗಾತ್ರ

ಬೆಂಗಳೂರು: ಬಾಲ್ಯವಿವಾಹಗಳು ನಡೆಯದಂತೆ ಜಾಗೃತಿ ಮೂಡಿಸಲು ಶಾಲೆ ಮತ್ತು ಪದವಿಪೂರ್ವ ಕಾಲೇ­ಜುಗಳಲ್ಲಿ ಕಾರ್ಯಾಗಾರಗಳನ್ನು ಆಯೋಜಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಉಮಾಶ್ರೀ ಅಧಿಕಾರಿಗಳಿಗೆ ಸೂಚಿಸಿದರು.

ನಗರದಲ್ಲಿ ಗುರುವಾರ ರಾಜ್ಯದ ಎಲ್ಲ ಜಿಲ್ಲೆಗಳ ಇಲಾಖೆಯ ಉಪ ನಿರ್ದೇಶಕರು ಮತ್ತು ಮಕ್ಕಳ ಅಭಿ­ವೃದ್ಧಿ ಅಧಿಕಾರಿಗಳ ಜತೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದಲ್ಲಿ ಬಾಲ್ಯ­ವಿವಾಹ ಪ್ರಕರಣಗಳು ಹೆಚ್ಚು ನಡೆ­ಯುತ್ತಿರುವುದು ವರದಿ­ಯಾ­ಗಿದೆ. ಆದ್ದರಿಂದ, ಬಾಲ್ಯವಿವಾಹ ತಡೆ ಕಾಯ್ದೆ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಸಲಹೆ ನೀಡಿದರು.

ಸರ್ಕಾರದ ಸೌಲಭ್ಯಗಳ ಬಗ್ಗೆ ಅಂಗವಿಕಲರಿಗೆ ಮತ್ತು ಮಹಿಳೆ­ಯರಿಗೆ ಸಮರ್ಪಕವಾದ ಮಾಹಿತಿ­ಯೇ ಇಲ್ಲ. ವಾರ್ತಾ ಇಲಾಖೆ ಸಹಯೋಗ ದೊಂದಿಗೆ ಜಿಲ್ಲಾಮಟ್ಟ­ದಲ್ಲಿ ಇಲಾಖೆಗಳ ಸೌಲಭ್ಯಗಳ ಬಗ್ಗೆ ಪ್ರಚಾರಾಂದೋಲನ ಹಮ್ಮಿಕೊಳ್ಳ­ಬೇಕು ಎಂದು ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT