ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಂಟಿಸಿ ಬಸ್‌ ಡಿಕ್ಕಿ: ಬಾಲಕ ಸಾವು

Last Updated 16 ಡಿಸೆಂಬರ್ 2013, 20:22 IST
ಅಕ್ಷರ ಗಾತ್ರ

ಬೆಂಗಳೂರು: ಬಿಎಂಟಿಸಿ ಬಸ್‌ ಡಿಕ್ಕಿ ಹೊಡೆದು ಮಹೇಂದ್ರ (16) ಎಂಬ ಬಾಲಕ ಮೃತಪಟ್ಟಿರುವ ಘಟನೆ ನಗರದ ಕ್ವೀನ್ಸ್‌ ರಸ್ತೆಯಲ್ಲಿ ಸೋಮವಾರ ರಾತ್ರಿ ನಡೆದಿದೆ.

ಕ್ವೀನ್ಸ್‌ ರಸ್ತೆ ಸಮೀಪದ ರಾಜೀವ್‌ ಗಾಂಧಿ ಕಾಲೊನಿ ನಿವಾಸಿ ಮಹೇಂದ್ರ, ಬಿಬಿಎಂಪಿ ಗುತ್ತಿಗೆ ಕಾಮಗಾರಿಯೊಂದರ ದಿನ­ಗೂಲಿ ಕಾರ್ಮಿಕನಾಗಿದ್ದ. ರಾತ್ರಿ 10 ಗಂಟೆ ಸುಮಾರಿಗೆ ಕೆಪಿಸಿಸಿ ಕಚೇರಿ ಸಮೀಪ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಬಿಎಂ­ಟಿಸಿ ಬಸ್‌ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಗೊಂಡಿದ್ದ ಆತನನ್ನು ಕೂಡಲೇ ಬೌರಿಂಗ್‌ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಮಾರ್ಗ ಮಧ್ಯೆ ಆತ ಮೃತಪಟ್ಟ. ಘಟನೆ ನಂತರ ಚಾಲಕ ಬಸ್‌ ನಿಲ್ಲಿಸದೆ ಮುಂದೆ ಹೋಗಿದ್ದಾನೆ. ಕ್ವೀನ್ಸ್‌ ರಸ್ತೆಯಲ್ಲಿರುವ ಎಲ್ಲ ಸಿ.ಸಿ ಟಿ.ವಿ ಕ್ಯಾಮೆರಾಗಳನ್ನು ಪರಿಶೀಲಿಸಲಾಗುತ್ತಿದೆ. ಸಿ.ಸಿ ಟಿ.ವಿಯಲ್ಲಿ ದಾಖಲಾಗಿರುವ ದೃಶ್ಯಗಳ ನೆರವಿನಿಂದ ಬಸ್‌ ಚಾಲಕನನ್ನು ಪತ್ತೆ ಹಚ್ಚಲಾಗುವುದು ಎಂದು ಶಿವಾಜಿನಗರ ಸಂಚಾರ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT