ಬೆಂಗಳೂರು: ಭೂಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಲೋಕಾಯುಕ್ತ ವಿಶೇಷ ಕೋರ್ಟ್ ಜಾಮೀನು ನಿರಾಕರಿಸಿದ ಕ್ರಮ ಕುರಿತು ಹೈಕೋರ್ಟ್ನಲ್ಲಿ ಸಲ್ಲಿಸಿದ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮಂಗಳವಾರ ಅಕ್ಟೋಬರ್ 20ಕ್ಕೆ ಮುಂದೂಡಿತು.
ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ನ ನ್ಯಾಯಮೂರ್ತಿ ಬಿ.ವಿ.ಪಿಂಟೊ ಅವರಿದ್ದ ಏಕಸದಸ್ಯ ಪೀಠವು ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 20ಕ್ಕೆ ನಿಗದಿಪಡಿಸಿತು. ಈ ಸಂದರ್ಭದಲ್ಲಿ ಹೈಕೋರ್ಟ್ನಲ್ಲಿ ಹಾಜರಿದ್ದ ಯಡಿಯೂರಪ್ಪ ಪರ ವಕೀಲ ರವಿ.ಬಿ.ನಾಯಕ್ ಅವರು ಯಡಿಯೂರಪ್ಪನವರಿಗೆ ಜಾಮೀನು ನೀಡುವಂತೆ ಮನವಿ ಮಾಡಿಕೊಂಡರೆ, ವಕೀಲ ಸಿರಾಜಿನ್ ಬಾಷಾ ಪರ ವಕೀಲರು ಜಾಮೀನು ನೀಡಬಾರದೆಂದು ಆಕ್ಷೇಪಣೆ ವ್ಯಕ್ತಪಡಿಸಿದರು.