ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಸ್‌ವೈ ಬಿಜೆಪಿ ಬಿಡಲಿ

Last Updated 23 ಜನವರಿ 2012, 19:30 IST
ಅಕ್ಷರ ಗಾತ್ರ

ತುಮಕೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಿಜೆಪಿ ತೊರೆಯುವುದು ಲೇಸು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಇಲ್ಲಿ ಸೋಮವಾರ ಲೇವಡಿ ಮಾಡಿದರು.

ಯುವ ಕಾಂಗ್ರೆಸ್ ಏರ್ಪಡಿಸಿದ್ದ `ಯುವ ಸಂಘರ್ಷ~ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರನ್ನು ಬಿಜೆಪಿ ಅತ್ಯಂತ ಕೆಟ್ಟದಾಗಿ ನಡೆಸಿಕೊಳ್ಳುತ್ತಿದೆ. ಯಡಿಯೂರಪ್ಪ ತಿಪ್ಪರಲಾಗ ಹಾಕಿದರು ಅವರನ್ನು ಮತ್ತೆ  ಆ ಪಕ್ಷ ಮುಖ್ಯಮಂತ್ರಿ ಮಾಡುವುದಿಲ್ಲ. ಬಿಜೆಪಿಯಿಂದ ಯಡಿಯೂರಪ್ಪ ಅವರನ್ನು ಹೊರಹಾಕುವ ದಿನಗಳು ಹತ್ತಿರಲ್ಲಿವೆ ಎಂದು ಆ ಪಕ್ಷದವರೇ ಮಾತನಾಡಿಕೊಳ್ಳುತ್ತಿದ್ದಾರೆ ಎಂದರು.

ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಈ ಸರ್ಕಾರದಲ್ಲಿ ಹಿಂಬದಿ ಸೀಟಿನ ಸವಾರ. ಯಡಿಯೂರಪ್ಪ ಮತ್ತು ಅವರ ಹಿಂಬಾಲಕ ಮಂತ್ರಿಗಳು ಆಡಿಸಿದಂತೆ ಸರ್ಕಾರ ನಡೆಯುತ್ತದೆ. ಇದರಿಂದಾಗಿ ಸದಾನಂದಗೌಡರ ನೀತಿ ನಿರೂಪಣೆಗಳು ಬದಲಾಗುತ್ತವೆ ಎಂದು ಆರೋಪಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT