ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಸ್‌ವೈ ಹೇಳಿದ್ದು ನನ್ನ ವಿರುದ್ಧ ಅಲ್ಲ- ಸಿ.ಎಂ

Last Updated 22 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: `ಬಿಜೆಪಿಯ ಕೆಲವು ಮುಖಂಡರೇ ವೀರಶೈವ ಸಮಾಜವನ್ನು ಒಡೆಯುವ ಯತ್ನ ನಡೆಸಿದ್ದಾರೆ~ ಎಂದು ಯಡಿಯೂರಪ್ಪ ಅವರು ಮಾಡಿರುವ ಆರೋಪದ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, `ಯಡಿಯೂರಪ್ಪನವರು ಈ ಆರೋಪ ಮಾಡಿದ್ದು ನನ್ನನ್ನು ಉದ್ದೇಶಿಸಿ ಅಲ್ಲ~ ಎಂದು ಹೇಳಿದ್ದಾರೆ. `ಆರೋಪದ ಕುರಿತು ಯಡಿಯೂರಪ್ಪನವರ ಜೊತೆ ಚರ್ಚಿಸುವೆ~ ಎಂದು ಈಶ್ವರಪ್ಪ ಅವರೂ ತಿಳಿಸಿದ್ದಾರೆ.

ಗೃಹ ಕಚೇರಿ `ಕೃಷ್ಣಾ~ದಲ್ಲಿ ಬುಧವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸದಾನಂದ ಗೌಡರು, `ಯಡಿಯೂರಪ್ಪನವರು ಅಂಥ ಆರೋಪ ಮಾಡುವಾಗ ನನ್ನ ಹೆಸರು ಹೇಳಿಲ್ಲ. ಅವರ ಜೊತೆ ನಾನು ಭಿನ್ನಾಭಿಪ್ರಾಯವನ್ನೂ ಹೊಂದಿಲ್ಲ. ಬಜೆಟ್ ಕುರಿತು ಅವರಿಂದ ಸಲಹೆ, ಸೂಚನೆ ಪಡೆಯುತ್ತೇನೆ~ ಎಂದು ತಿಳಿಸಿದರು.

ಸಾವಯವ ಕೃಷಿ ಕುರಿತು ವಿಧಾನಸೌಧದಲ್ಲಿ ಗುರುವಾರ ನಡೆಯಲಿರುವ ಸಮ್ಮೇಳನದಲ್ಲೂ ಯಡಿಯೂರಪ್ಪ ಅವರು ಭಾಗವಹಿಸಲಿದ್ದಾರೆ ಎಂದ ಮುಖ್ಯಮಂತ್ರಿಗಳು, `ಅವರು ಗುರುವಾರ ನಡೆಸಲು ಉದ್ದೇಶಿಸಿರುವ ಶಾಸಕರ ಸಭೆ ಕುರಿತು ನನ್ನಲ್ಲಿ ಯಾವುದೇ ಮಾಹಿತಿ ಇಲ್ಲ~ ಎಂದು ಉತ್ತರಿಸಿದರು.

ಯಡಿಯೂರಪ್ಪನವರು ಮಾಡಿರುವ ಆರೋಪದ ಕುರಿತು ಚಿಕ್ಕಮಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, `ಅವರು ಏಕೆ ಹೀಗೆ ಮಾತನಾಡಿದ್ದಾರೆ ಎನ್ನುವುದು ತಿಳಿದಿಲ್ಲ. ಈ ಬಗ್ಗೆ ಅವರೊಂದಿಗೆ ಚರ್ಚೆ ನಡೆಸುತ್ತೇನೆ~ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT