ಬೆಂಗಳೂರು: ವಕೀಲರಾದ ಸಿರಾಜಿನ್ ಬಾಷಾ ಅವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಸಲ್ಲಿಸಿದ್ದ ಎರಡು ಮತ್ತು ಮೂರನೇ ಖಾಸಗಿ ದೂರಿನ ವಿವರಗಳು ಇಂತಿವೆ:
ದೂರು- 2
1- ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಸಬಾ ಹೋಬಳಿಯ ಅರಕೆರೆ ಗ್ರಾಮದಲ್ಲಿ ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ 2.05 ಎಕರೆ ಭೂಮಿಯನ್ನು ಕಾನೂನುಬಾಹಿರವಾಗಿ ಭೂಸ್ವಾಧೀನದಿಂದ ಕೈಬಿಟ್ಟಿರುವುದು. ಬಳಿಕ ಮುಖ್ಯಮಂತ್ರಿಯವರ ಕುಟುಂಬದ ಸದಸ್ಯರ ಬೇನಾಮಿದಾರರು ಅದನ್ನು ಖರೀದಿಸಿರುವುದು.
2- ಬೆಂಗಳೂರು ದಕ್ಷಿಣ ತಾಲ್ಲೂಕಿನ ದೇವರಚಿಕ್ಕನಹಳ್ಳಿಯ ಸರ್ವೇ ನಂಬರ್ 51/1ರಲ್ಲಿ ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ ಭೂಮಿಯನ್ನು ಮುಖ್ಯಮಂತ್ರಿಯವರ ಸಹಚರ ಕೆ.ಮಂಜುನಾಥ್ ಅವರಿಗೆ ಲಾಭ ಮಾಡಿಕೊಡುವ ದುರುದ್ದೇಶದಿಂದ ಡಿನೋಟಿಫೈ ಮಾಡಿರುವುದು.
3- ಅರ್ಕಾವತಿ ಬಡಾವಣೆಗಾಗಿ ಗೆದ್ದಲಹಳ್ಳಿಯ ಸರ್ವೇ ನಂಬರ್ 42/1ಎ2, 42/4-ಎ2 ಮತ್ತು 42/2ಬಿಗಳಲ್ಲಿ ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ ಭೂಮಿಯನ್ನು ಮುಖ್ಯಮಂತ್ರಿಯವರ ಸಹಚರರಾದ ವಿ.ಮಂಜುನಾಥ್ ಮತ್ತು ಕೆ.ಶಿವಪ್ಪ ಅವರಿಗೆ ಲಾಭ ಮಾಡಿಕೊಡುವ ದುರುದ್ದೇಶದಿಂದ ಡಿನೋಟಿಫೈ ಮಾಡಿರುವುದು.