ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿ.ಜಯಶ್ರೀಗೆ ರೇಣುಕಶ್ರೀ ಪ್ರಶಸ್ತಿ

Last Updated 17 ಸೆಪ್ಟೆಂಬರ್ 2011, 8:10 IST
ಅಕ್ಷರ ಗಾತ್ರ

ಹುಕ್ಕೇರಿ: ಹಿರೇಮಠದ ದಸರಾ ಉತ್ಸವದಲ್ಲಿ  ಗುರುಶಾಂತೇಶ್ವರ ಜನಕಲ್ಯಾಣ ಪ್ರತಿಷ್ಠಾನದ ವತಿಯಿಂದ ಕೊಡುವ `ರೇಣುಕಶ್ರೀ~  ಪ್ರಶಸ್ತಿಗೆ  ರಾಜ್ಯಸಭಾ ಸದಸ್ಯೆ ಹಾಗೂ ರಂಗ ಕಲಾವಿದೆ ಬಿ.ಜಯಶ್ರೀ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕೃಷಿ  ಸಚಿವ ಉಮೇಶ ಕತ್ತಿ ಹೇಳಿದರು.   

ಪ್ರತಿವರ್ಷ ನಡೆಯುವ ದಸರಾ ಉತ್ಸವದಲ್ಲಿ   ವಿವಿಧ  ಕ್ಷೇತ್ರಗಳಲ್ಲಿ  ಸಾಧನೆಗೈದ ಮಹನೀಯರನ್ನು ಗುರುತಿಸಿ  ನೀಡಲಾಗುವ  ರೇಣುಕಶ್ರೀ  ಪ್ರಶಸ್ತಿಯು  ಹತ್ತು ಸಾವಿರ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ ಎಂದು ಪತ್ರಕರ್ತರಿಗೆ ತಿಳಿಸಿದರು.

ಪ್ರಸಕ್ತ  ಸಾಲಿನ ಪ್ರಶಸ್ತಿ  ಪ್ರದಾನ ಸಮಾರಂಭ  ಅಕ್ಟೋಬರ್ 1 ರಂದು  ಮಠಾಧ್ಯಕ್ಷ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ  ನಡೆಯಲಿದೆ.   ಸೆ. 28ರಿಂದ ಅಕ್ಟೋಬರ್  6 ರವರೆಗೆ  ನಡೆಯುವ  ದಸರಾ ಉತ್ಸವದಲ್ಲಿ   ಮಕ್ಕಳ, ಜಾನಪದ, ಭಾವೈಕ್ಯ, ಶೈಕ್ಷಣಿಕ ಮತ್ತು ಮಹಿಳಾ ದಸರಾ ಕಾರ್ಯಕ್ರಮ ಜರುಗಲಿವೆ ಎಂದು ಹೇಳಿದರು.

 ಗುರುಶಾಂತೇಶ್ವರ ಸಂಸ್ಥಾನ ಹಿರೇಮಠದ  ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT