ಬೆಂಗಳೂರು: ಬಿಜೆಪಿಯ ಜಿಲ್ಲಾ ಘಟಕಗಳಿಗೆ ಇನ್ನೊಂದು ವಾರದಲ್ಲಿ ಹೊಸ ಅಧ್ಯಕ್ಷರನ್ನು ನೇಮಕ ಮಾಡಲು ಪಕ್ಷದ ಪ್ರಮುಖರ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಪಕ್ಷದ ಕಚೇರಿಯಲ್ಲಿ ಶುಕ್ರವಾರ ಸಂಜೆ ನಡೆದ ಈ ಸಭೆಯಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಪ್ರಹ್ಲಾದ ಜೋಶಿ, ಮುಖಂಡರಾದ ಅನಂತಕುಮಾರ್, ಜಗದೀಶ ಶೆಟ್ಟರ್, ಡಿ.ವಿ.ಸದಾನಂದ ಗೌಡ, ಕೆ.ಎಸ್.ಈಶ್ವರಪ್ಪ, ಆರ್.ಅಶೋಕ ಮತ್ತಿತರ ಹಿರಿಯ ಮುಖಂಡರು ಭಾಗವಹಿಸಿದ್ದರು.
ಲೋಕಸಭಾ ಚುನಾವಣೆಗೆ ತಯಾರಿ ನಡೆಸುವ ಉದ್ದೇಶದಿಂದ ಕರೆದಿದ್ದ ಈ ಸಭೆಯಲ್ಲಿ ಅವಧಿ ಮುಗಿದ ಜಿಲ್ಲಾಧ್ಯಕ್ಷರನ್ನು ಬದಲಿಸಲು ತೀರ್ಮಾನಿಸಲಾಯಿತು. ಇನ್ನೊಂದು ವಾರದಲ್ಲಿ ಈ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಜೋಶಿ `ಪ್ರಜಾವಾಣಿ'ಗೆ ತಿಳಿಸಿದರು.
ಸ್ಥಳೀಯ ಮುಖಂಡರ ಸಲಹೆ ಪ್ರಕಾರ ಹೊಸಬರನ್ನು ನೇಮಕ ಮಾಡಲಾ ಗುವುದು. ಬಿಜೆಪಿಯ 36 ಸಂಘಟನಾ ಜಿಲ್ಲೆಗಳ ಪೈಕಿ 27ರಲ್ಲಿ ಹೊಸಬರನ್ನು ಆಯ್ಕೆ ಮಾಡಿದ್ದು, ಅಧಿಕೃತವಾಗಿ ಪ್ರಕಟಿಸುವುದು ಮಾತ್ರ ಬಾಕಿ ಇದೆ. ಈ ವಾರದಲ್ಲಿ ಎಲ್ಲವೂ ಪೂರ್ಣವಾಗಲಿದೆ ಎಂದರು.
ಚಳವಳಿಗೆ ಸಿದ್ಧತೆ: ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗಳನ್ನು ಹಮ್ಮಿಕೊಳ್ಳು ವುದಕ್ಕೂ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಜಗದೀಶ ಶೆಟ್ಟರ್ ಮುಖ್ಯಮಂತ್ರಿ ಯಾಗಿದ್ದ ಸಂದರ್ಭದಲ್ಲಿ 43 ಹೊಸ ತಾಲ್ಲೂಕುಗಳನ್ನು ಘೋಷಣೆ ಮಾಡಿದ್ದರು.