ಬಿಬಿಎಂಪಿ ಚುನಾವಣೆ ಸೇರಿದಂತೆ ಪಕ್ಷದ ಇತರ ಕೆಲಸಗಳಿಗೆ ಯಡಿಯೂರಪ್ಪ ಹಣ ನೀಡಿದ್ದರು ಎಂಬ ಕೈಮಗ್ಗ ನಿಗಮದ ಅಧ್ಯಕ್ಷ ಎಂ.ಡಿ.ಲಕ್ಷ್ಮಿನಾರಾಯಣ್ ಅವರ ಹೇಳಿಕೆ ಬಗ್ಗೆ ಸಭೆಯಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಯಿತು ಎನ್ನಲಾಗಿದೆ. ಈ ರೀತಿ ಹೇಳಿಕೆ ನೀಡುವವರ ವಿರುದ್ಧ ಶಿಸ್ತು ಕ್ರಮಕ್ಕೆ ಪ್ರಧಾನ್ ಸೂಚನೆ ನೀಡಿದ್ದಾರೆ. ಸಭೆಯಲ್ಲಿ ಪಕ್ಷದ ಸಂಘಟನಾ ಪ್ರಧಾನ ಕಾರ್ಯದರ್ಶಿ ಸಂತೋಷ್ ಸೇರಿದಂತೆ ಇತರ ಪ್ರಮುಖರು ಹಾಜರಿದ್ದರು. ಸಚಿವ ಜಗದೀಶ್ ಶೆಟ್ಟರ್ ಅವರು, ಸಭೆ ಆರಂಭವಾದ ಸ್ವಲ್ಪ ಹೊತ್ತಿನಲ್ಲೇ ಕೆಲಸದ ನಿಮಿತ್ತ ಹೊರನಡೆದರು.