ಲಖನೌ (ಐಎಎನ್ಎಸ್): ಬಾಬಾ ರಾಮ್ದೇವ್ ಅವರೊಂದಿಗೆ ಸರ್ಕಾರ ವರ್ತಿಸಿದ ರೀತಿಯನ್ನು ಖಂಡಿಸಿ ಬಿಜೆಪಿ ಭಾನುವಾರ ಸಂಜೆಯಿಂದ 24 ಗಂಟೆಗಳ ರಾಷ್ಟ್ರವ್ಯಾಪಿ ಸತ್ಯಾಗ್ರಹ ಆರಂಭಿಸಿದೆ.
ಪಕ್ಷದ ಅಧ್ಯಕ್ಷ ನಿತಿನ್ ಗಡ್ಕರಿ ಹಾಗೂ ಮುಖಂಡ ಎಲ್.ಕೆ. ಅಡ್ವಾಣಿ ಅವರ ನೇತೃತ್ವದಲ್ಲಿ ಹಲವು ಮುಖಂಡರು ಸತ್ಯಾಗ್ರಹಕ್ಕೆ ಚಾಲನೆ ನೀಡಲು ರಾಜ್ಘಾಟ್ಗೆ ತೆರಳಿದರು. ಬೃಹತ್ ಸಂಖ್ಯೆಯ ಕಾರ್ಯಕರ್ತರೊಂದಿಗೆ ಸಮಾವೇಶಗೊಂಡು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಹಿರಿಯ ಧುರೀಣರಾದ ರಾಜ್ನಾಥ್ ಸಿಂಗ್, ಅರುಣ್ ಜೇಟ್ಲಿ, ರವಿಶಂಕರ್ ಪ್ರಸಾದ್, ಮುರಳಿ ಮನೋಹರ ಜೋಷಿ, ಅನಂತಕುಮಾರ್ ಮತ್ತಿತರರು ಪಾಲ್ಗೊಂಡಿದ್ದರು.
ಗಡ್ಕರಿ ಟೀಕೆ: ರಾಮ್ದೇವ್ ಅವರ ವಿಷಯದಲ್ಲಿ ಸರ್ಕಾರ ಸರ್ವಾಧಿಕಾರಿಯಂತೆ ವರ್ತಿಸಿದೆ ಎಂದು ನಿತಿನ್ ಗಡ್ಕರಿ ಟೀಕಿಸಿದ್ದಾರೆ.