ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವುದಾಗಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಘೋಷಿಸಿದೆ.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ರಾಜ್ಯ ಸಂಚಾಲಕ ಲಕ್ಷ್ಮಿನಾರಾಯಣ ನಾಗವಾರ `ಮೊದಲನೇ ಬಾರಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಪ್ರಕೃತಿ ಸಂಪತ್ತನ್ನು ಲೂಟಿಮಾಡಿ, ಅಪಾರ ಪ್ರಮಾಣದ ಭ್ರಷ್ಟಾಚಾರ ನಡೆಸಿತು. ಬಿಜೆಪಿ ಕಾಲದಲ್ಲಿಯೇ ಮುಖ್ಯಮಂತ್ರಿಯೊಬ್ಬ ಜೈಲಿಗೆ ಹೋಗಿದ್ದು' ಎಂದು ಟೀಕಿಸಿದರು. `ಇರುವ ಪಕ್ಷಗಳಿಗೆ ಹೋಲಿಸಿದರೆ, ಕಾಂಗ್ರೆಸ್ ಉತ್ತಮ. ಪ್ರಜಾಪ್ರಭುತ್ವ ಬಲ ಪಡಿಸಲು, ಕೋಮುಭಾವ ನಿಯಂತ್ರಿಸಲು ಕಾಂಗ್ರೆಸ್ಗೆ ಬೆಂಬಲ ನೀಡುತ್ತಿದ್ದೇವೆ' ಎಂದರು.