ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ, ಸಂಘ ಪರಿವಾರದಲ್ಲಿ ಕಪ್ಪುಹಣ

Last Updated 13 ಜೂನ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: `ಬಿಜೆಪಿ ಮತ್ತು ಸಂಘ ಪರಿವಾರದವರು ಕಪ್ಪುಹಣದ ಧಣಿಗಳಾಗಿದ್ದು, ಭ್ರಷ್ಟಾಚಾರ ಹಾಗೂ ಕಪ್ಪುಹಣದ ವಿರುದ್ಧ ಹೋರಾಟ ನಡೆಸುವ ಯಾವುದೇ ನೈತಿಕ ಹಕ್ಕು ಅವರಿಗೆ ಇಲ್ಲ~ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ್‌ಸೋಮವಾರ  ಟೀಕಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಬಿಜೆಪಿ ಹಾಗೂ ಸಂಘ ಪರಿವಾರದ ಬಳಿಯೇ ದೊಡ್ಡ ಪ್ರಮಾಣದ ಕಪ್ಪುಹಣ ಇದೆ. ಈ ಸಂಸ್ಥೆಗಳು ಗುರುದಕ್ಷಿಣೆ ಹೆಸರಿನಲ್ಲಿ ದೇಣಿಗೆ ಪಡೆದು ಸಂಪಾದಿಸಿರುವ ಅಕ್ರಮ ಆಸ್ತಿಗಳ ವಿವರವನ್ನು ಬಹಿರಂಗಪಡಿಸಲಿ~ ಎಂದು ಸವಾಲು ಹಾಕಿದರು. ಸಂಸದ ಅನಂತಕುಮಾರ್ ಭ್ರಷ್ಟಾಚಾರದ ವಿರುದ್ಧ ಆಂದೋಲನ ನಡೆಸುವುದಾಗಿ ಹೇಳಿದ್ದಾರೆ.

ಆದರೆ `ಹುಡ್ಕೋ~ದಲ್ಲಿ ನಡೆದ ರೂ 13ಸಾವಿರ ಕೋಟಿಗಳ ಹಗರಣದಲ್ಲಿ ಅವರ ವಿರುದ್ಧ ಇರುವ ಆರೋಪದ ಬಗ್ಗೆ ತನಿಖೆ ನಡೆಯುತ್ತಿದೆ. ಮೊದಲು ಅವರು ಆರೋಪಮುಕ್ತರಾಗಲಿ. ನಂತರ ಚಳವಳಿ ನಡೆಸುವ ಬಗ್ಗೆ ಯೋಚಿಸಲಿ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT