ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಬಿಜೆಪಿ ಸಂಘಟನೆಗೆ ಶ್ರಮಿಸಿ'

Last Updated 5 ಡಿಸೆಂಬರ್ 2012, 6:21 IST
ಅಕ್ಷರ ಗಾತ್ರ

ಬೀದರ್: ಕಾರ್ಯಕರ್ತರು ಬಿಜೆಪಿ ಸಂಘಟನೆ ಬಲಪಡಿಸಲು ಶ್ರಮಿಸಬೇಕು ಎಂದು ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷ ಶಿವರಾಜ ಗಂದಗೆ ಸಲಹೆ ಮಾಡಿದರು.

ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ನಡೆದ ಜಿಲ್ಲಾ ಪದಾಧಿಕಾರಿಗಳು, ಮೋರ್ಚಾ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಗಳ ಸಭೆಯಲ್ಲಿ ಮಾತನಾಡಿದರು.

ಪಕ್ಷದ ಕಾರ್ಯಕರ್ತರು ಶಿಸ್ತು ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.
ರಾಜ್ಯ ಬಿಜೆಪಿ ಸರ್ಕಾರದ ಸಾಧನೆ ಬಗೆಗೆ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಲು ಮುಂಬರುವ ದಿನಗಳಲ್ಲಿ ಬೂತ್‌ಮಟ್ಟದ ಸಮಾವೇಶಗಳನ್ನು ನಡೆಸಬೇಕಿದೆ ಎಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಾಬುವಾಲಿ ಹೇಳಿದರು.
ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರೇವಣಸಿದ್ಧಪ್ಪ ಜಲಾದೆ ಮಾತನಾಡಿದರು.

ರಾಜ್ಯ ಕಾರ್ಯಕಾರಿಣಿ ಸದಸ್ಯರಾದ  ಬಸವರಾಜ ಆರ್ಯ, ಪದ್ಮಾಕರ ಪಾಟೀಲ್, ಅಲ್ಪಸಂಖ್ಯಾತರ ವಿಭಾಗದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯ ರೌಫೊದ್ದೀನ್ ಕಚೇರಿವಾಲೆ, ಜಿಲ್ಲಾ ವಕ್ತಾರ ಬಸವರಾಜ  ಪವಾರ್, ಮಹೇಶ್ ಪಾಲಂ, ಜಯಕುಮಾರ್ ಕಾಂಗೆ ಉಪಸ್ಥಿತರಿದ್ದರು.

ಜಿಲ್ಲಾ ಕಾರ್ಯದರ್ಶಿ ಉಪೇಂದ್ರ ದೇಶಪಾಂಡೆ ನೆರವೇರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT