ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಗೆ ಜನರಿಂದ ತಕ್ಕ ಪಾಠ: ಪುರಂದೇಶ್ವರಿ

Last Updated 24 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: `ಬಿಜೆಪಿ ಸರ್ಕಾರವು ಐದು ವರ್ಷಗಳ ಆಡಳಿತಾವಧಿಯಲ್ಲಿ ಅಧಿಕಾರ ದುರುಪಯೋಗ ಮಾಡಿಕೊಂಡು ಭ್ರಷ್ಟಾಚಾರ ಮತ್ತು ಅಕ್ರಮಗಳಲ್ಲಿ ಭಾಗಿಯಾಯಿತೇ ಹೊರತು ಜನರ ಪರ ಯೋಜನೆ ರೂಪಿಸಲಿಲ್ಲ' ಎಂದು ಕೇಂದ್ರ ಸಚಿವೆ ಪುರಂದೇಶ್ವರಿ ದೇವಿ ಆರೋಪಿಸಿದರು.

ನಗರದಲ್ಲಿ ಬುಧವಾರ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ  ಮಾತನಾಡಿದ ಅವರು, `ಬಿಜೆಪಿ ಸರ್ಕಾರದ ದುರಾಡಳಿತದಿಂದ ಜನರು ಬೇಸರಗೊಂಡಿದ್ದು, ಈ ಬಾರಿ ಚುನಾವಣೆಯಲ್ಲಿ ಜನರು ತಕ್ಕ ಪಾಠ ಕಲಿಸುತ್ತಾರೆ' ಎಂದರು. `ಬಿಜೆಪಿ ಸರ್ಕಾರ ಮುಖ್ಯಮಂತ್ರಿಯಲ್ಲದೇ ಸಚಿವರು ಕೂಡ ಜೈಲುವಾಸ ಅನುಭವಿಸಿದ್ದಾರೆ.

ಸರ್ಕಾರದಲ್ಲಿ ಇದ್ದವರೇ ಕಳಂಕಿತರು ಆಗಿರುವಾಗ, ಉತ್ತಮ ಮತ್ತು ಜನಪರ ಆಡಳಿತ ಹೇಗೆ ನಿರೀಕ್ಷಿಸಲು ಸಾಧ್ಯ? ಬಿಜೆಪಿಯು ಈ ಬಾರಿ ಹೆಚ್ಚಿನ ಸ್ಥಾನ ಗೆಲ್ಲುವುದಿಲ್ಲ' ಎಂದು ತಿಳಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಡಾ. ಕೆ.ಸುಧಾಕರ್ ಸೇರಿದಂತೆ ಮತ್ತಿತರ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT