ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಯಿಂದ ರೈತರಿಗೆ ವಂಚನೆ

Last Updated 16 ಅಕ್ಟೋಬರ್ 2011, 19:35 IST
ಅಕ್ಷರ ಗಾತ್ರ

ಹೊಸಕೋಟೆ: ರೈತರ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ರೈತರಿಗೇ ವಿದ್ಯುತ್ ಕೊಡದೆ ವಂಚಿಸುತ್ತಿದೆ ಎಂದು ಮಾಜಿ ಸಚಿವ ಎನ್. ಚಿಕ್ಕೇಗೌಡ ಟೀಕಿಸಿದ್ದಾರೆ.
 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ರಾಜ್ಯ ಸರ್ಕಾರ ಕಳೆದ ಮೂರು ವರ್ಷಗಳಿಂದ ವಿದ್ಯುತ್ ಉತ್ಪಾದನೆ ಬಗ್ಗೆ ಯಾವುದೇ ಯೋಜನೆ ರೂಪಿಸಿದೆ ಇರುವುದೇ ಇಂದಿನ ವಿದ್ಯುತ್ ಸಮಸ್ಯೆಗೆ ಕಾರಣ~ ಎಂದು ದೂರಿದರು.

`ಮುಖ್ಯಮಂತ್ರಿಗಳು ಹಾಗೂ ಇಂಧನ ಸಚಿವರು ವಿದ್ಯುತ್ ಸಮಸ್ಯೆ ಬಗ್ಗೆ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿರುವುದು ವಿಪರ್ಯಾಸದ ಸಂಗತಿ~ ಎಂದ ಅವರು, `ಗ್ರಾಮೀಣ ಪ್ರದೇಶದ ಕೃಷಿಕರ ಪಂಪ್‌ಸೆಟ್‌ಗಳಿಗೆ ವಿದ್ಯುತ್ ನೀಡದೆ ನಗರ ಪ್ರದೇಶದ ವಾಸಿಗಳಿಗೆ ಹೆಚ್ಚಿನ ಪ್ರಮಾಣದ ವಿದ್ಯುತ್ ಕೊಡಲು ಹೊರಟಿರುವುದು ಖಂಡನೀಯ~ ಎಂದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT