ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಪಿಎಲ್ ಪಡಿತರದಾರರಿಗೆ ನೇರ ನಗದು ಸಬ್ಸಿಡಿ

Last Updated 28 ಫೆಬ್ರುವರಿ 2011, 10:25 IST
ಅಕ್ಷರ ಗಾತ್ರ

 ನವದೆಹಲಿ (ಪಿಟಿಐ): ಕೇಂದ್ರ ಹಣಕಾಸು ಸಚಿವ ಪ್ರಣವ್ ಮುಖರ್ಜಿ ಅವರು ಸಂಸತ್ತಿನಲ್ಲಿ ಮಂಡಿಸಿದ 2011-12ರ ಸಾಲಿನ ಬಜೆಟ್ ನ ಪ್ರಮುಖ ಅಂಶಗಳಲ್ಲಿ ನೇರ ನಗದು ಸಬ್ಸಿಡಿಯು ಒಂದಾಗಿದ್ದು, ಸದ್ಯ ಹಲವು ಯೋಜನೆಗಳಿಗೆ ನೀಡಲಾಗುತ್ತಿರುವ ಸಬ್ಸಿಡಿ ದುರ್ಬಳಕೆಯಾಗುತ್ತಿರುವುದನ್ನು ಮನಗಂಡು ಬಿಪಿಎಲ್ ಬಳಕೆದಾರರಿಗೆ ಸೀಮೆಎಣ್ಣೆ ಹಾಗೂ ರಸಗೊಬ್ಬರಗಳ ಮೇಲೆ ನೇರ ನಗದು ಸಬ್ಸಿಡಿ ನೀಡಲು ಉದ್ದೇಶಿಸಲಾಗಿದೆ. ಇದು ಮುಂದಿನ ವರ್ಷದ ಮಾರ್ಚ್ ಹೊತ್ತಿಗೆ ಜಾರಿಗೆ ಬರಲಿದೆ ಎಂದು ಅವರು ತಿಳಿಸಿದರು.

 ನಂದನ್ ನಿಲೇಕಣಿ ಅವರ ಅಧ್ಯಕ್ಷತೆಯಲ್ಲಿ ಸೀಮೆಎಣ್ಣೆ, ಅಡುಗೆ ಅನಿಲ ಹಾಗೂ ರಸಗೊಬ್ಬರಗಳ ಮೇಲಿನ ನೇರ ಸಬ್ಸಿಡಿ ವರ್ಗಾವಣೆ ಕುರಿತ ರೂಪುರೇಷೆಯನ್ನು ಸಿದ್ದಪಡಿಸುವ ಕಾರ್ಯಪಡೆಯು ಈಗಾಗಲೇ ಈ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಅದರ ಮಧ್ಯಂತರ ವರದಿ ಇದೇ ವರ್ಷ ಜೂನ್ ತಿಂಗಳಲ್ಲಿ ಬರುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದರು.

ಪ್ರಸ್ತುತ ಬಿಪಿಎಲ್ ಕುಟುಂಬದವರಿಗೆ ಪಡಿತರದಲ್ಲಿ ಕಡಿಮೆ ಬೆಲೆಗೆ ಸೀಮೆಎಣ್ಣೆಯನ್ನು ವಿತರಿಸಲಾಗುತ್ತಿದೆ. ಹಾಗೂ ರಸಗೊಬ್ಬರ ಕಂಪೆನಿಗಳಿಗೆ ಸರ್ಕಾರವೇ ನೇರವಾಗಿ ಹಣ ನೀಡಿ ರೈತರಿಗೆ ಕಡಿಮೆ ಬೆಲೆಗೆ ರಸಗೊಬ್ಬರಗಳು ಸಿಗುವಂತೆ ಮಾಡುತ್ತಿದೆ.

ಸೋರಿಕೆ, ಕಲಬೆರಕೆ ಹಾಗೂ ಅದಕ್ಷತೆಗಳಿಂದಾಗಿ ಈ ಯೋಜನೆಗಳು ಅನುಪಯುಕ್ತವಾಗಿವೆ. ಇದನ್ನು ಸರಿಪಡಿಸಲೆಂದೆ  ಇನ್ಫೋಸಿಸ್ ಮಾಜಿ ಅಧ್ಯಕ್ಷ ನಂದನ್ ನಿಲೇಕಣಿ ಅವರ ಅಧ್ಯಕ್ಷತೆಯಲ್ಲಿ ಹಣಕಾಸು, ರಾಸಾಯನಿಕ ಗೊಬ್ಬರ, ಕೃಷಿ, ಆಹಾರ, ಪೆಟ್ರೋಲಿಯಂ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಗಳ ಕಾರ್ಯದರ್ಶಿಗಳನ್ನೊಳಗೊಂಡ ಕಾರ್ಯಪಡೆಯನ್ನು ಸರ್ಕಾರ ರಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT