ಸುವರ್ಣ ಸೌಧ (ಬೆಳಗಾವಿ): ಸರ್ಕಾರಿ ಶಾಲೆಗಳ ಬಿಸಿಯೂಟ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ಅಡುಗೆ ಸಿಬ್ಬಂದಿಗೆ ಹೆಚ್ಚುವರಿ ₨ ೫೦೦ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ.
ಅಡುಗೆ ಸಿಬ್ಬಂದಿಯ ಮನವಿ ಹಿನ್ನೆಲೆಯಲ್ಲಿ ನವೆಂಬರ್ 7 ರಂದು ವಿವಿಧ ಸಂಘಟನೆಗಳ ಜೊತೆ ಚರ್ಚೆ ನಡೆಸಲಾಗಿತ್ತು.
ಅಲ್ಲಿ ನಡೆದ ಮಾತುಕತೆ ಹಿನ್ನೆಲೆಯಲ್ಲಿ ಈಗ ನೀಡುತ್ತಿರುವ ಸಂಭಾವನೆಗೆ ಹೆಚ್ಚುವರಿಯಾಗಿ ಪ್ರತಿ ತಿಂಗಳು ₨ ೫೦೦ ನೀಡಲು ಗುರುವಾರ ನಿರ್ಧರಿಸಲಾಗಿದೆ ಎಂದು ಸಚಿವರು ಪ್ರಕಟಣೆಯಲ್ಲಿ ವಿವರಿಸಿದ್ದಾರೆ.