ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಸಿಸಿಐಯದ್ದು ಏಕಪಕ್ಷೀಯ ನಿರ್ಧಾರ

Last Updated 4 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): `ಬಿಸಿಸಿಐ ಯಾರ ಮಾತನ್ನೂ ಕೇಳುವುದಿಲ್ಲ. ತಾನು ತೆಗೆದುಕೊಂಡಿದ್ದೇ ನಿರ್ಧಾರ. ಯಾವುದೇ ವಿಷಯಕ್ಕೆ ಸಂಬಂಧಿಸಿದಂತೆ ಏಕಪಕ್ಷೀಯ ತೀರ್ಮಾನ ತೆಗೆದುಕೊಳ್ಳುತ್ತಾರೆ. ಇದನ್ನು ನಾವು ಹೇಗೆ ಸಹಿಸಿಕೊಳ್ಳಲು ಸಾಧ್ಯ. ಹಾಗಾಗಿ ನಾವು ಈ ನಿರ್ಧಾರ ತೆಗೆದುಕೊಳ್ಳಬೇಕಾಯಿತು~ ಎಂದು `ಸಹಾರಾ ಇಂಡಿಯಾ ಪರಿವಾರ~ ಅಧ್ಯಕ್ಷ ಸುಬ್ರತೊ ರಾಯ್ ತಿಳಿಸಿದ್ದಾರೆ.

ಈ ಮೂಲಕ ಭಾರತ ತಂಡದ ಪ್ರಾಯೋಜಕತ್ವ ಹಾಗೂ ಐಪಿಎಲ್‌ನಿಂದ ಹಿಂದೆ ಸರಿಯಲು ತೆಗೆದುಕೊಂಡಿರುವ ನಿರ್ಧಾರವನ್ನು ಅವರು ಸಮರ್ಥಿಸಿಕೊಂಡಿದ್ದಾರೆ.

ಆದರೆ ಈ ನಮ್ಮ ನಿರ್ಧಾರದಿಂದ ಸಹಾರಾ ಪುಣೆ ವಾರಿಯರ್ಸ್ ತಂಡದ ಆಟಗಾರರಿಗೆ ಅನ್ಯಾಯವಾಗಬಾರದು. ಹಾಗಾಗಿ ಈ ಸಂಬಂಧ ಬಿಸಿಸಿಐನೊಂದಿಗೆ ಸಮಾಲೋಚನೆ ನಡೆಸಲು ಸಿದ್ಧರಿರುವುದಾಗಿ ಹೇಳಿದ್ದಾರೆ.

`ಐಪಿಎಲ್‌ನಲ್ಲಿಆಡಲು ಅವಕಾಶ ಸಿಗದೇ ಆಟಗಾರರು ಸಮಸ್ಯೆ ಎದುರಿಸಬಾರದು ಹಾಗಾಗಿ ಪುಣೆ ತಂಡವನ್ನು ಯಾರಾದರೂ ಖರೀದಿಸಲು ಬಿಸಿಸಿಐ ಆದಷ್ಟು ಬೇಗ ಕ್ರಮಕೈಗೊಳ್ಳಬೇಕು~ ಎಂದು ರಾಯ್ ವಿವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT