ಬನ್ನೇರುಘಟ್ಟ ರಸ್ತೆಯ ಮೀನಾಕ್ಷಿ ಮಾಲ್ನಿಂದ ಹುಳಿಮಾವು ಬಸ್ ನಿಲ್ದಾಣದ ವರೆಗೂ ಪೊಲೀಸ್ ಠಾಣಾ ರಸ್ತೆಯಲ್ಲಿ ಬೀದಿ ದೀಪಗಳಿಲ್ಲದೆ ಕಾರ್ಗತ್ತಲು ಇದೆ. ಇದರಿಂದ ವಾಹನ ಸಂಚಾರಕ್ಕೆ ಹಾಗೂ ಪಾದಚಾರಿಗಳು ನಡೆದು ಹೋಗುವುದಕ್ಕೆ ತುಂಬಾ ತೊಂದರೆಯಾಗಿದೆ.
ಅಲ್ಲದೆ ರಸ್ತೆಯ ಎರಡೂ ಬದಿಗಳಲ್ಲಿ ಗಿಡಗಳು, ಪೊದೆಗಳು ಇರುವುದರಿಂದ ವಿಷ ಜಂತುಗಳ ಸಂಚಾರದಿಂದ ಪಾದಚಾರಿಗಳಿಗೆ ಅಪಾಯವಿದೆ. ಆದ್ದರಿಂದ ಸಾರ್ವಜನಿಕರ ಅನುಕೂಲಕ್ಕಾಗಿ ಈ ರಸ್ತೆಯಲ್ಲಿ ಬೀದಿ ದೀಪಗಳನ್ನು ಅಳವಡಿಸಲು ಮನವಿ.